Advertisement

PU Exam ನಕಲು ಮಾಡಲು ಸಹಕಾರ ನೀಡಿಲ್ಲವೆಂದು ಪೇದೆ‌ ಮೇಲೆಯೇ ಹಲ್ಲೆ!

07:18 PM Mar 22, 2024 | Team Udayavani |

ಕಲಬುರಗಿ: ಪಿಯು ದ್ವಿತೀಯ ಪರೀಕ್ಷೆಯಲ್ಲಿ ನಕಲು ಮಾಡಲಿ ಸಹಕಾರ ನೀಡಿಲ್ಲವೆಂದು ಪೇದೆ ಮೇಲೆಯೇ ಹಲ್ಲೆ ಮಾಡಿರಯವ ಘಟನೆ ಅಫಜಲಪುರ ತಾಲೂಕಿನ ಕರಜಗಿಯಲ್ಲಿ ನಡೆದಿದೆ.

Advertisement

ಅಫಜಲಪುರ ತಾಲೂಕಿನ ಕರಜಗಿ ಪರೀಕ್ಷಾ ಕೇಂದ್ರದಲ್ಲಿ ತಂಗಿಗೆ ಪರೀಕ್ಷೆಯಲ್ಲಿ ಸಹಾಯ ಮಾಡಿಲ್ಲವೆಂದು ಪೇದೆ ಮುಖದ ಮೇಲೆಯೇ ಕಲ್ಲಿನಿಂದ ಹೊಡೆದು ತೀವ್ರವಾಗಿ ಗಾಯಗೊಳಿಸಲಾಗಿದೆ.‌ ಪಂಡಿತ್ ಪಾಂಡ್ರೆ ಹಲ್ಲೆಗೆ ಒಳಗಾದ ಪೊಲೀಸ್ ಪೇದೆಯಾಗಿದ್ದು, ತನ್ನ ತಂಗಿಗೆ ನಕಲು ಮಾಡಲು ಬಿಡುವುದಿಲ್ಲವೇ ಎಂದು ಕೈಲಾಸ್ ಎಂಬ ವ್ಯಕ್ತಿ ಹಲ್ಲೆಗೈದಿದ್ದಾನೆ.

ಪ್ರಕರಣ‌ ಸಂಬಂಧ ಆರೋಪಿ ಕೈಲಾಸ್ ಹಾಗು ಆತನ ಸ್ನೇಹಿತ ಸಮೀರ್ ನನ್ನು ಪೊಲೀಸರು ಬಂಧಿಸಿದ್ದಾರೆ.‌ ಈ ಕುರಿತು ಅಫಜಲಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next