Advertisement

ಶಿಕ್ಷಕನ ಮೇಲೆ ಹಲ್ಲೆ ಮಾಡಿದವ ವಶಕ್ಕೆ

04:56 PM Jul 01, 2021 | Team Udayavani |

ಕುಷ್ಟಗಿ: ಇಲ್ಲಿನ ವಿದ್ಯಾ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಕ್ರಮವಾಗಿ ನುಗ್ಗಿ ಶಿಕ್ಷಕ ಹಾಗೂ ಅಡುಗೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಯುವಕನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

Advertisement

ಕಳೆದ ಮಂಗಳವಾರ ಕುಡಿದ ಅಮಲಿನಲ್ಲಿದ್ದ ಯುವಕ ಸಂಜೀವ ಮಾಂಬ್ರುಕರ್‌ ಶಾಲೆಯ ದೈಹಿಕ ಶಿಕ್ಷಕ ಮಲ್ಲಿಕಾರ್ಜುನ ಲಕ್ಕಲಕಟ್ಟಿ ಹಾಗೂ ಅಡುಗೆ ಸಿಬ್ಬಂದಿ ಶಾಂತಮ್ಮ ಪತ್ತಾರ ಅವರನ್ನು ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದಲ್ಲದೇ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ.

ಈ ಪ್ರಕರಣದ ಹಿನ್ನೆಲೆಯಲ್ಲಿ ಮದ್ಯ ವ್ಯಸನಿ ಯುವಕನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next