Advertisement

Mangaluru ಯುವತಿ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪಿಗಳ ಶೀಘ್ರ ಬಂಧನ: ಕಮಿಷನರ್‌

12:42 AM Aug 31, 2024 | Team Udayavani |

ಮಂಗಳೂರು: ನಗರದ ಲಾಲ್‌ಬಾಗ್‌ ಬಳಿಯ ರೆಸ್ಟೋರೆಂಟ್‌ ಒಂದರಲ್ಲಿ ಯುವತಿ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಯುತ್ತಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸುತ್ತೇವೆ ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.

Advertisement

ಮಂಗಳೂರಿನಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಅ.25ರಂದು ಘಟನೆ ನಡೆದಿದ್ದು, ಹೊಟೇಲ್‌ನ ಪಾರ್ಕಿಂಗ್‌ ಜಾಗದಲ್ಲಿ ಗಲಾಟೆಯಾಗಿದೆ.

ಯುವತಿ ದೂರಿನ ಪ್ರಕಾರ ಈ ಬಗ್ಗೆ ಕೇಸ್‌ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next