Advertisement

Bengaluru: ನಟ ಧ್ರುವ ಸರ್ಜಾ ಜಿಮ್‌ ತರಬೇತುದಾರನ ಮೇಲೆ ಹಲ್ಲೆ

01:41 PM May 28, 2024 | Team Udayavani |

ಬೆಂಗಳೂರು: ನಟ ಧ್ರುವ ಸರ್ಜಾ ಅವರ ಜಿಮ್ ತರಬೇತುದಾರ ಪ್ರಶಾಂತ್‌ ಪೂಜಾರಿ ಎಂಬುವರ ಮೇಲೆ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಬನಶಂಕರಿ ಕೆ.ಆರ್‌.ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಹಲ್ಲೆ ಸಂಬಂಧ ಬನಶಂಕರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಬನಶಂಕರಿಯ ಕೆ.ಆರ್‌.ರಸ್ತೆಯಲ್ಲಿ ಪ್ರಶಾಂತ್‌ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್‌ ನಲ್ಲಿ ಬಂದ ಇಬ್ಬರು ಅಪರಿಚಿತರು ಮಾರಕಾಸ್ತ್ರದಿಂದ ಅವರ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವೈಯಕ್ತಿಕ ವಿಚಾರಕ್ಕೆ ಸ್ಥಳೀಯ ಹುಡುಗರ ಜತೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ ಎನ್ನಲಾಗಿದೆ. ಈ ಬಗ್ಗೆ ಎಫ್‌ಐಆರ್‌ ದಾಖಲಿಸಿಕೊಂಡು ದುಷ್ಕರ್ಮಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಈ ಕುರಿತು ನಟ ಧ್ರುವ ಸರ್ಜಾ ಪ್ರತಿಕ್ರಿಯಿಸಿ, ಪ್ರಶಾಂತ್‌ ನಮ್ಮ ಹುಡುಗ, ಅವನ ಜತೆಗಿರುತ್ತೇನೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next