Advertisement
ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಳ್ಳಲಾಗಿದ್ದ 69ನೇ ಗಣರಾಜೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈ ನೆಲದ ಶ್ರೀಮಂತ ಪರಂಪರೆಯನ್ನು ಇನ್ನಷ್ಟು ಉಜ್ವಲಗೊಳಿಸುವ ನಿಟ್ಟಿನಲ್ಲಿ ಭಾತೃತ್ವ, ಐಕ್ಯತೆ ಬಲಪಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಎಲ್ಲ ರಂಗಗಳಲ್ಲಿ ಇನ್ನೂ ಹೆಚ್ಚು ಅಭಿವೃದ್ದಿಯಾಗಬೇಕಿದ್ದು, ಪ್ರಗತಿಪರ ಚಿಂತನೆ ಮೂಲಕ ಸಮೃದ್ಧ ಸ್ವಾಭಿಮಾನ ದೇಶ
ಕಟ್ಟಲು ಮುಂದಾಗಬೇಕು ಎಂದು ಹೇಳಿದರು.
Related Articles
Advertisement
ಪುರಸಭೆ ಅಧ್ಯಕ್ಷೆ ತಬಸುಮ್ ಅಮ್ಜದ್ ಖಾನ್, ತಾಪಂ ಅಧ್ಯಕ್ಷೆ ಶರಣಮ್ಮ ಮುದಿಗೌಡ, ನಗರ ಯೋಜನಾ ಪ್ರಾಧಿಕಾರಿದ ಅಧ್ಯಕ್ಷ ಸೈಯದ್ ಇಲಿಯಾಸ್ ಖಾದ್ರಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸೈಯದ್ ಅಬೀದ್ ಖಾದ್ರಿ ಗುರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಬೀರಪ್ಪ ಕಡದಿನ್ನಿ, ಪುರಸಭೆ ಮುಖ್ಯಾ ಧಿಕಾರಿ ವೆಂಕಟೇಶ, ಉಪ ಖಜಾನೆ ಇಲಾಖ ಅಧಿಕಾರಿ ಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಿಹಾಳ ಇದ್ದರು.
ಧ್ವಜಾರೋಹಣ ಮಾಡದೆ ಅವಮಾನ: ಚಿತ್ರನಾಳ ಹಟ್ಟಿಚಿನ್ನದಗಣಿ: ಅಧಿಸೂಚಿತ ಪ್ರದೇಶದಲ್ಲಿರುವ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಗಣರಾಜ್ಯೋತ್ಸವದ ದಿನದಂದು ಧ್ವಜಾರೋಹಣ ಮಾಡಿಲ್ಲ ಎಂದು ಜೈ ಭೀಮ ಯುವ ಸೇನೆ ಅಧ್ಯಕ್ಷ ಮಲ್ಲಿಕಾರ್ಜುನ ಚಿತ್ರನಾಳ ಆರೋಪಿಸಿದ್ದಾರೆ. ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಕಳೆದ ಐದು ವರ್ಷದಿಂದ ಧ್ವಜಾರೋಹಣ ಮಾಡಿಲ್ಲ.
ಆದ್ದರಿಂದ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಸ್ಪಷ್ಟನೆ: ಮೇಲಾ ಧಿಕಾರಿಗಳಿಂದ ಯಾವುದೇ ಆದೇಶ ಇಲ್ಲ. ಮೊದಲಿನಿಂದಲೂ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಧ್ವಜಾರೋಹಣ ನೆರವೇರಿಸಲಾಗುತ್ತದೆ. ಗ್ರಾಮೀಣ ಮಟ್ಟದಲ್ಲಿ ನಾವು ಧ್ವಜಾರೋಹಣ ಮಾಡುವುದಿಲ್ಲ ಎಂದು ಪಿಜಿಬಿ ವ್ಯವಸ್ಥಾಪಕ ಎ.ವಿ. ಮಠ ಸ್ಪಷ್ಟಪಡಿಸಿದ್ದಾರೆ.