Advertisement

ಪ್ರಚಾರದ ಅಖಾಡಕ್ಕಿಂದು ಘಟಾನುಘಟಿಗಳ ರಂಗಪ್ರವೇಶ

12:33 AM Apr 25, 2023 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ವಾಪಸ್‌ ಸರ್ಕಸ್‌ ಮುಗಿದು ಅಖಾಡ ಸ್ಪಷ್ಟಗೊಂಡ ಬೆನ್ನಲ್ಲೇ ಘಟಾನುಘಟಿ ನಾಯಕರು ಪ್ರಚಾರದ “ರಂಗಪ್ರವೇಶ’ಕ್ಕೆ ಸಜ್ಜಾಗಿದ್ದಾರೆ.

Advertisement

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರದ ಗೃಹ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಕಾಂಗ್ರೆಸ್‌ನ ಪ್ರಿಯಾಂಕ ವಾದ್ರಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್‌.ಡಿ.ಕುಮಾರಸ್ವಾಮಿ ಸಹಿತ ನಾಯಕರು ಪ್ರಚಾರಕ್ಕೆ ಧುಮಕಲಿದ್ದಾರೆ.

ಪ್ರಿಯಾಂಕ ವಾದ್ರಾ ಅವರು ಮಂಗಳವಾರ ಟಿ.ನರಸೀಪುರದ ಹೆಳವರ ಹುಂಡಿಯಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಅನಂತರ ಹನೂರಿನಲ್ಲಿ ಮಹಿಳಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.30ಕ್ಕೆ ಕೆ. ಆರ್‌.ನಗರದಲ್ಲಿ ರೋಡ್‌ ಶೋ ನಡೆಸಲಿದ್ದಾರೆ.

ಯೋಗಿ ಆದಿತ್ಯನಾಥ್‌ ಅವರು ಬುಧವಾರ ಮಂಡ್ಯದಲ್ಲಿ ಮೊದಲ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ ವಿಜಯಪುರದ ಇಂಡಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಅಮಿತ್‌ ಶಾ ಅವರು ಮಂಗಳವಾರ ಬಿಜಾಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿಯಲ್ಲಿ ಪ್ರಚಾರ ಸಭೆ ಹಾಗೂ ರೋಡ್‌ ಶೋನಲ್ಲಿ ಭಾಗಿಯಾಗಲಿದ್ದಾರೆ.

Advertisement

ಸಿದ್ದರಾಮಯ್ಯ ಅವರು, ಸವದತ್ತಿ, ಕಾಗವಾಡ, ಕುಡಚಿ, ರಾಯಭಾಗ, ನಿಪ್ಪಾಣಿಯಲ್ಲಿ ಪ್ರಚಾರ ಮಾಡಲಿದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಪಿರಿಯಾಪಟ್ಟಣ ಹಾಗೂ ಕೆ.ಆರ್‌. ನಗರದಲ್ಲಿ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್‌. ಡಿ.ಕುಮಾರಸ್ವಾಮಿಯವರ ಮೈಸೂರಿನ ಚಾಮರಾಜ, ವರುಣಾ ಸೇರಿ ಹಲವು ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next