Advertisement

ಎ. 13: ಬಿಜೆಪಿ ಕಾರ್ಯಕರ್ತರ ಬೃಹತ್‌ ಸಮಾವೇಶ

07:30 AM Apr 12, 2018 | Team Udayavani |

ಕಾರ್ಕಳ: ವಿಧಾನಸಭೆಯ ಚುನಾವಣೆಗೆ ಪಕ್ಷ ಅಧಿಕೃತ ಅಭ್ಯರ್ಥಿಯನ್ನಾಗಿ ತನ್ನನ್ನು ಘೋಷಣೆ ಮಾಡಿದೆ. ಚುನಾವಣಾ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ ಎ. 13ರಂದು ಬೆಳಗ್ಗೆ 10 ಗಂಟೆಗೆ ಇಲ್ಲಿನ ಮಂಜುನಾಥ ಪೈ ಸಭಾಭವನದಲ್ಲಿ ಬೃಹತ್‌ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಎ. 11ರಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Advertisement

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸಕಲ ಸಿದ್ದತೆಯನ್ನು ಬಿಜೆಪಿ ನಡೆಸುತ್ತಿದೆ ಎಂದರು.
ಎ. 18ರಂದು ಮನೆಮನೆ ಸಂಪರ್ಕದ ಅಭಿಯಾನ ಪ್ರಾರಂಭವಾಗಲಿದೆ. ಎ. 23ರಂದು ನಾಮಪತ್ರ ಸಲ್ಲಿಸಲಿದ್ದೇನೆ. ಬೆಳಗ್ಗೆ 10 ಗಂಟೆಗೆ ಅನಂತಶಯನ ವೃತ್ತದಿಂದ ಮೆರವಣಿಗೆ ನಡೆಯಲಿದೆ. 11 ಗಂಟೆಗೆ ನಾಮಪತ್ರ ಸಲ್ಲಿಕೆ ನಡೆಯಲಿದೆ. 11.30ರಿಂದ ಕುಕ್ಕುಂದೂರು ಪಂಚಾಯತ್‌ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದರು.

ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ ಜಾತಿರಾಜಕಾರಣ, ಹಣದ ಆಮಿಷ ಒಡ್ಡುತ್ತಾ ಕೀಳು ರಾಜಕೀಯ ನಡೆಸುತ್ತಿದೆ. ಆದರೆ ಬಿಜೆಪಿ ಅಭಿವೃದ್ಧಿಯ ದೃಷ್ಟಿಯಿಂದ ರಾಜಕೀಯ ನಡೆಸುತ್ತಿದೆ ಎಂದರು.

ಗೋಷ್ಠಿಯಲ್ಲಿ ಬಿಜೆಪಿ ಕ್ಷೇತ್ರ ಅಧ್ಯಕ್ಷ ಮಣಿರಾಜ್‌ ಶೆಟ್ಟಿ, ವಕ್ತಾರ ಹರೀಶ್‌ ಶೆಣೈ, ನಗರ ಅಧ್ಯಕ್ಷ ಅನಂತಕೃಷ್ಣ ಶೆಣೈ, ಆನಂದ ಬಂಡೀಮಠ, ದಯಾನಂದ ಹೆಗ್ಡೆ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next