Advertisement

ವಿಧಾನಸಭಾ ಚುನಾವಣೆ 2023: ಇಂದು ಬಿಜೆಪಿ ಉಸ್ತುವಾರಿಗಳ ಸಭೆ

09:51 PM Feb 14, 2023 | Team Udayavani |

ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಕ್ಕೆ ನಿಯೋಜಿಸಿರುವ ಚುನಾವಣಾ ಉಸ್ತುವಾರಿಗಳ ಜತೆಗೆ ಬಿಜೆಪಿ ಹಿರಿಯ ನಾಯಕರ ಸಭೆ ಬೆಂಗಳೂರಿನಲ್ಲಿ ಬುಧವಾರ ನಡೆಯಲಿದೆ.

Advertisement

ಈ ಸಭೆಗೆ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌ ಆಗಮಿಸುತ್ತಾರೆಂದು ಈ ಹಿಂದೆ ತೀರ್ಮಾನಿಸಲಾಗಿತ್ತು. ಆದರೆ ಕೊನೇ ಹಂತದಲ್ಲಿ ಅವರ ಪ್ರವಾಸ ರದ್ದಾಗಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಖಾಸಗಿ ಹೊಟೇಲ್‌ನಲ್ಲಿ ನಡೆಯುವ ಈ ಸಭೆಯಲ್ಲಿ 224 ಕ್ಷೇತ್ರಗಳ ಉಸ್ತುವಾರಿಗಳು ಭಾಗವಹಿಸಲಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಭಾಗವಹಿಸುವರು. ಈ ಸಭೆಯ ಬಳಿಕ ಉಸ್ತುವಾರಿಗಳಿಗೆ ಒಂದು ತಿಂಗಳ “ಟಾಸ್ಕ್ ‘ ನೀಡಲಾಗುತ್ತದೆ.

ವಿಸ್ತಾರಕರ ರೀತಿ ಉಸ್ತುವಾರಿಗಳೂ ಕೆಲಸ ಮಾಡುವ ಜತೆಗೆ ಟಿಕೆಟ್‌ ಆಕಾಂಕ್ಷಿಗಳ ಮಧ್ಯೆ ಇರುವ ಗೊಂದಲ ಶಮನ ಮಾಡಿ. ಸಂಭಾವ್ಯ ಆದರೆ ಗೆಲ್ಲುವ ಅಭ್ಯರ್ಥಿಯ ಹೆಸರನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರಿಗೆ ಮುಚ್ಚಿದ ಲಕೋಟೆಯಲ್ಲಿ ತಲುಪಿಸುವಂತೆ ಸೂಚಿಸಲಾಗಿದೆ.

ಶಾಸಕಾಂಗ ಪಕ್ಷದ ಸಭೆ :
ಅದೇ ರೀತಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯೂ ಬುಧವಾರ ಸಂಜೆ ಆರು ಗಂಟೆಗೆ ನಡೆಯಲಿದೆ. ಬಜೆಟ್‌ ಅಧಿವೇಶನ ಹಿನ್ನೆಲೆಯಲ್ಲಿ ಈ ಸಭೆಯನ್ನು ಕರೆಯಲಾಗಿದೆ. ಇದರ ಜತೆಗೆ ಚುನಾವಣೆ ಸಿದ್ಧತೆ ಹಾಗೂ ಇನ್ನಿತರ ವಿದ್ಯಮಾನಗಳ ಬಗ್ಗೆಯೂ ಇಲ್ಲಿ ಚರ್ಚಿಸಲಾಗುತ್ತದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next