Advertisement

ವರ್ಷದೊಳಗೆ ವಿಧಾನಸಭಾ ಚುನಾವಣೆ: ಬೊಮ್ಮಾಯಿ ಬಾಂಬ್‌

09:18 PM Jun 19, 2024 | Team Udayavani |

ಹಾವೇರಿ: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವದ ಗೊಂದಲವಿದೆ. ಒಂದು ವರ್ಷದೊಳಗಾಗಿ ವಿಧಾನಸಭಾ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಹಿರೇಕೆರೂರು ತಾಲೂಕಿನ ಮಾಸೂರಿನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಮತದಾರರಿಗೆ ಕೃತಜ್ಞತಾ ಸಮಾರಂಭದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಜನರು ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸ ಕಳೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಅದನ್ನು ತೋರಿಸಿದ್ದಾರೆ. ಕಾಂಗ್ರೆಸ್‌ ಶಾಸಕರು ಹತಾಶರಾಗಿದ್ದಾರೆ. ಮುಖ್ಯಮಂತ್ರಿ ಬಳಿ ಹೋದರೆ ಅವರ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಅವರಿಗೆ ಜನರ ಬಳಿ ಹೋಗಲು ಆಗುತ್ತಿಲ್ಲ. ರಾಜಕಾರಣ ಮತ್ತು ಜನರ ಕಾರಣದಿಂದ ಸರ್ಕಾರದ ಆಯುಷ್ಯ ಬಹಳ ಕಡಿಮೆ ಇದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next