Advertisement

ಚುನಾವಣೆಗೆ 3 ವಲಯಗಳಲ್ಲಿ ಸಭೆ: ಮುಂದುವರಿದ BJP ಸಿದ್ಧತೆ

09:41 PM Jun 30, 2023 | Team Udayavani |

ನವದೆಹಲಿ: ಮುಂದಿನ ವರ್ಷದ ಏಪ್ರಿಲ್‌-ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಜು.6, 7, 8ರಂದು ಉತ್ತರ, ದಕ್ಷಿಣ ಮತ್ತು ಪೂರ್ವ ಭಾಗಗಳನ್ನು ಕೇಂದ್ರೀಕರಿಸಿ ಸಭೆಗಳನ್ನು ನಡೆಸಲಿದೆ. ಜು.6ರಂದು ಪೂರ್ವ ವಲಯದ ಸಭೆ ಗುವಾಹಟಿಯಲ್ಲಿ ನಡೆಯಲಿದ್ದು ಅದರಲ್ಲಿ ಬಿಹಾರ, ಜಾರ್ಖಂಡ್‌, ಒಡಿಶಾ, ಪಶ್ಚಿಮ ಬಂಗಾಳ, ಅಸ್ಸಾಂ, ಸಿಕ್ಕಿಂ, ಅರುಣಾಚಲ ಪ್ರದೇಶ, ಮಣಿಪುರ ಸೇರಿದಂತೆ ಈಶಾನ್ಯ ಹಾಗೂ ಪೂರ್ವ ಭಾಗದ ಮುಖಂಡರ ಸಭೆ ನಡೆಯಲಿದೆ.

Advertisement

ಜು.7ರಂದು ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರ, ಲಡಾಖ್‌, ಹಿಮಾಚಲ ಪ್ರದೇಶ, ಪಂಜಾಬ್‌, ರಾಜಸ್ಥಾನ ಸೇರಿದಂತೆ ಉತ್ತರ ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಲು ಸಭೆ ನಡೆಸಲಿದೆ. ಜು.8ರಂದು ಹೈದರಾಬಾದ್‌ನಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು, ಗೋವಾ, ಮಹಾರಾಷ್ಟ್ರ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪಗಳಲ್ಲಿನ ಸಿದ್ಧತೆಯ ಬಗ್ಗೆ ಚುನಾವಣಾ ಸಿದ್ಧತೆಗಳ ಬಗ್ಗೆ ಪರಾಮರ್ಶೆ ನಡೆಯಲಿದೆ.

ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ:
ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಶಿರೋಮಣಿ ಅಕಾಲಿ ದಳ, ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ, ಜೆಡಿಯು ದೂರವಾದ ಬಳಿಕ ರಾಷ್ಟ್ರೀಯ ಲೋಕತಾಂತ್ರಿಕ ಜನತಾ ಪಾರ್ಟಿಯ ಪಶುಪತಿ ಕುಮಾರ್‌ ಪರಸ್‌, ಅಪ್ನಾ ದಳದ ಸುಪ್ರಿಯಾ ಸುಳೆ, ರಿಪಬ್ಲಿಕನ್‌ ಪಾರ್ಟಿ ಆಫ್ ಇಂಡಿಯಾದ ರಾಮದಾಸ್‌ ಅಠಾವಳೆ ಮಾತ್ರ ಈಗ ಸಚಿವರಾಗಿ ಉಳಿದಿದ್ದಾರೆ. ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಈಗ ಎನ್‌ಡಿಎ ಭಾಗವೇ ಆಗಿದೆ. ಬಿಹಾರ ಹಾಗೂ ಇತರ ರಾಜ್ಯಗಳಲ್ಲಿರುವ ಸಣ್ಣ ಪಕ್ಷಗಳನ್ನು ಮೈತ್ರಿಕೂಟಕ್ಕೆ ಸೇರಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ಈ ಮೂಲಕ ಪ್ರತಿಪಕ್ಷಗಳು ಸ್ಥಾಪಿಸಲು ಉದ್ದೇಶಿಸಿದ್ದ ಮಹಾಮೈತ್ರಿಕೂಟಕ್ಕೆ ತಿರುಗೇಟು ನೀಡಲು ಬಿಜೆಪಿ ಮುಂದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next