Advertisement

ನವೆಂಬರ್‌-ಡಿಸೆಂಬರ್‌ನಲ್ಲಿ ವಿಧಾನಸಭೆಗೆ ಚುನಾವಣೆ: ಡಿವಿಎಸ್‌

11:41 PM Jun 29, 2019 | Team Udayavani |

ಕೆ.ಆರ್‌.ಪುರ: ಸದ್ಯದಲ್ಲೇ ರಾಜ್ಯದಲ್ಲಿ ಮತ್ತೂಮ್ಮೆ ಮಧ್ಯಂತರ ಚುನಾವಣೆ ಎದುರಾಗಲಿದ್ದು, ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರು ಸಜ್ಜಾಗಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಕರೆ ನೀಡಿದ್ದಾರೆ.

Advertisement

ಕೆ.ಆರ್‌.ಪುರದ ರಾಮಮೂರ್ತಿನಗರದಲ್ಲಿ ಶನಿವಾರ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಸಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂಬ ಯಾವುದೇ ಗ್ಯಾರಂಟಿ ಇಲ್ಲ.

ಇದೇ ವರ್ಷ ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ವಿಧಾನಸಭೆಗೆ ಮಧ್ಯಂತರ ಚುನಾವಣೆ ಬರಬಹುದು ಎನ್ನುವ ಮೂಲಕ ರಾಜ್ಯದಲ್ಲಿರುವ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರ ಪತನಗೊಳ್ಳಬಹುದು ಎಂಬ ಸೂಚನೆಯನ್ನು ನೀಡಿದರು. ಅಲ್ಲದೆ, ಕೇಂದ್ರದಲ್ಲಿ ಬಂದಂತೆ ರಾಜ್ಯದಲ್ಲೂ ಶೀಘ್ರದಲ್ಲೇ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

Advertisement

Udayavani is now on Telegram. Click here to join our channel and stay updated with the latest news.

Next