Advertisement

ವಿಧಾನಸಭೆ ಕಾರ್ಯದರ್ಶಿ ಅಮಾನತು: ನೋಟಿಸ್‌

01:01 AM Feb 13, 2019 | |

ಬೆಂಗಳೂರು: ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಎಸ್‌.ಮೂರ್ತಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ವಿಧಾನಸಭೆ ಸ್ಪೀಕರ್‌ಗೆ ಹೈಕೋರ್ಟ್‌ ಮಂಗಳವಾರ ನೋಟಿಸ್‌ ಜಾರಿಗೊಳಿಸಿದೆ.

Advertisement

ಸ್ಪೀಕರ್‌ ಶಿಫಾರಸಿನಂತೆ ತಮ್ಮನ್ನು ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಅಮಾನತುಗೊಳಿಸಿ ವಿಧಾನಸಭೆಯ ವಿಶೇಷ ಮಂಡಳಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಎಸ್‌.ಮೂರ್ತಿ ಸಲ್ಲಿಸಿರುವ ಅರ್ಜಿಯು ನ್ಯಾ. ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು. ಕೆಲ ಹೊತ್ತು ವಾದ ಆಲಿಸಿದ ನ್ಯಾಯಮೂರ್ತಿಗಳು ಅರ್ಜಿಗೆ ಸಂಬಂಧಿಸಿದಂತೆ ವಿಧಾನಸಭೆಯ ವಿಶೇಷ ಮಂಡಳಿ, ವಿಧಾನಸಭೆ ಸ್ಪೀಕರ್‌ ಹಾಗೂ ವಿಧಾನಸಭೆಯ ಪ್ರಭಾರ ಕಾರ್ಯದರ್ಶಿಯವರಿಗೆ ನೋಟಿಸ್‌ ಜಾರಿಗೆ ಆದೇಶಿಸಿತು. ವಿಚಾರಣೆ ವೇಳೆ ಹಾಜರಿದ್ದ ಸಹಾಯಕ ಸರ್ಕಾರಿ ಅಭಿಯೋಜಕರು ಸ್ಪೀಕರ್‌ ಪರ ನೋಟಿಸ್‌ ಪಡೆದುಕೊಂಡರು. ಬಳಿಕ ನ್ಯಾಯಪೀಠ ವಿಚಾರಣೆಯನ್ನು ಫೆ.21ಕ್ಕೆ ಮುಂದೂಡಿತು.

ಈ ಅರ್ಜಿ ಫೆ.4ರಂದು ನ್ಯಾ. ಆರ್‌. ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆದರೆ, ಅರ್ಜಿದಾರ ವ್ಯಕ್ತಿ ತಮಗೆ ಪರಿಚಯವಿದ್ದು, ಹಾಗಾಗಿ ಈ ಅರ್ಜಿಯ ವಿಚಾರಣೆ ನನ್ನ ಪೀಠದಲ್ಲಿ ಬೇಡ ಎಂದು ಹೇಳಿ, ವಿಚಾರಣೆಯಿಂದ ಹಿಂದೆ ಸರಿದಿದ್ದರು. ಅದರಂತೆ ಮಂಗಳವಾರ (ಫೆ.12) ಈ ಅರ್ಜಿಯು ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ವಿಚಾರಣೆ ನಿಗದಿಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next