Advertisement
ದೆಹಲಿಯಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ರಾಜ್ಯದ ಪರವಾಗಿ ಪಾಲ್ಗೊಂಡು ಮಾತನಾಡಿದ ಸಿಎಂ ಕುಮಾರಸ್ವಾಮಿ, ರಾಷ್ಟ್ರವು ಎದುರಿಸುತ್ತಿರುವ ಕೃಷಿ ಬಿಕ್ಕಟ್ಟಿನ ಕುರಿತು ಸರ್ಕಾರಗಳು ಗಮನ ಕೇಂದ್ರೀಕರಿಸಬೇಕು. ಆ ನಿಟ್ಟಿನಲ್ಲಿ ಸಾಲದ ಸುಳಿಗೆ ಸಿಲುಕಿರುವ ರೈತರ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸರ್ಕಾರ ಸಿದ್ಧವಾಗಿದ್ದು, ಈ ಕೆಲಸಕ್ಕೆ ಕೇಂದ್ರ ಸರ್ಕಾರ ನಮ್ಮ ಸಹಾಯಕ್ಕೆ ಬರಬೇಕು ಎಂದರು.
Related Articles
ಉದ್ಯೋಗ ಸೃಜನೆ ಮತ್ತು ಕೌಶಲ್ಯ ತರಬೇತಿ ವಿಚಾಗಳನ್ನು ನೀತಿ ಆಯೋಗದ ಕಾರ್ಯಸೂಚಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ. ದೇಶದ ಅಭಿವೃದ್ಧಿಗೆ ಹೂಡಿಕೆಗಳನ್ನು ಆಕರ್ಷಿಸುವುದು ಎಷ್ಟು ಮುಖ್ಯವೋ, ಕೌಶಲ್ಯಾಭಿವೃದ್ಧಿ ಕೂಡ ಅಷ್ಟೇ ಅಗತ್ಯವಿದೆ. ಕರ್ನಾಟಕ ಸರ್ಕಾರ ಕೌಶಲ್ಯಾಭಿವೃದ್ಧಿಗೆ ಸಾಕಷ್ಟು ಒತ್ತು ನೀಡಿದ್ದು, ಇದನ್ನು ದ್ವಿಗುಣಗೊಳಿಸುವ ಅಗತ್ಯವಿದೆ ಎಂದಿದ್ದಾರೆ.
Advertisement
ವಿಕೋಪ ಪರಿಹಾರ ಹೆಚ್ಚಿಸಿವಿಪತ್ತು ನಿರ್ವಹಣೆಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಕಡಿಮೆ ಅನುದಾನ ಬಂದಿರುವುದನ್ನು ನೀತಿ ಆಯೋಗದ ಸಭೆಯಲ್ಲಿ ಪ್ರಸ್ತಾಪಿಸಿದ ಕುಮಾರಸ್ವಾಮಿ, ರಾಜ್ಯ ಕಳೆದ ಹಲವು ವರ್ಷಗಳಿಂದ ಪ್ರಕೃತಿ ವಿಕೋಪ ಸಮಸ್ಯೆಗಳಿಂದ ಬಳಲುತ್ತಿದೆ. ಇದರಿಂದ ರಾಜ್ಯ ಸರ್ಕಾರ ಪ್ರತಿ ವರ್ಷ ಹೆಚ್ಚುವರಿ ಮೊತ್ತವನ್ನು ವಿಕೋಪ ಪರಿಹಾರಕ್ಕೆ ಬಳಸಬೇಕಿದ್ದು, ಇದು ರಾಜ್ಯ ವಿಕೋಪ ಪರಿಹಾರ ನಿಧಿಗೆ ಕೇಂದ್ರ ನೀಡುವ ಅನುದಾನಕ್ಕಿಂತ ಆರು ಪಟ್ಟು ಹೆಚ್ಚಾಗಿದೆ. 2015-20ರ ಅವಧಿಗೆ ವಿಕೋಪ ಪರಿಹಾರ ನಿಧಿಯಡಿ ರಾಜ್ಯಕ್ಕೆ 1,375 ಕೋಟಿ ರೂ. ಮಾತ್ರ ಹಂಚಿಕೆಯಾಗಿದ್ದು, ಇತರೆ ರಾಜ್ಯಗಳಿಗೆ ಹೋಲಿಸಿದರೆ ಇದು ತೀರಾ ಕಡಿಮೆ. ಆದ್ದರಿಂದ ಈ ಮೊತ್ತ ಹೆಚ್ಚಿಸಬೇಕಿದೆ ಎಂದಿದ್ದಾರೆ. ಸಭೆಯಲ್ಲಿ ಮಾತನಾಡಲು ಸಿಕ್ಕಿದ ಏಳು ನಿಮಿಷದಲ್ಲಿ ರೈತರ ಸಾಲ ಮನ್ನಾಕ್ಕೆ ನೆರವು ಕೋರಿದ್ದೇನೆ. ಆರೋಗ್ಯ, ಕೌಶಲ್ಯಾಭಿವೃದ್ಧಿ, 2ನೇ ಹಂತಗಳ ನಗರಗಳ ಅಭಿವೃದ್ಧಿಗೆ ಆದ್ಯತೆ ನೀಡುವುದು ಮತ್ತು ರಾಜ್ಯದ ಹಲವು ಸಮಸ್ಯೆಗಳ ಬಗ್ಗೆ ಗಮನ ಸೆಳೆದಿದ್ದೇನೆ.
– ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ನೀತಿ ಆಯೋಗದ ಮುಖ್ಯಾಂಶಗಳು
– ಭಾರತದ ಆರ್ಥಿಕತೆಯನ್ನು ಡಬಲ್ ಡಿಜಿಟ್ಗೆ ಏರಿಕೆ ಮಾಡುವುದು
– 5 ಲಕ್ಷ ಕೋಟಿ ಡಾಲರ್ಗೆ ಭಾರತ ಆರ್ಥಿಕತೆಯನ್ನು ತಲುಪಿಸುವುದು
– 23 ಮುಖ್ಯಮಂತ್ರಿಗಳಿಂದ ಸಭೆಯಲ್ಲಿ ಭಾಗಿ, ಒಡಿಶಾ, ಕಾಶ್ಮೀರ, ದೆಹಲಿ ಸಿಎಂ ಗೈರು
– ಪ್ರವಾಹ ಪೀಡಿತ ರಾಜ್ಯಗಳಿಗೆ ಎಲ್ಲಾ ರೀತಿಯ ನೆರವಿನ ಭರವಸೆ ನೀಡಿದ ಪ್ರಧಾನಿ
– 15ನೇ ಹಣಕಾಸು ಆಯೋಗದ ವರದಿಗಾಗಿ ಸಲಹೆ ಸೂಚನೆ ನೀಡುವಂತೆ ರಾಜ್ಯಗಳಿಗೆ ಸಲಹೆ
– ರೈತರ ಆದಾಯ ದ್ವಿಗುಣ, ಆಯುಷ್ಮಾನ್ ಭಾರತ್, ಮಿಷನ್ ಇಂದ್ರಧನುಷ್, ಪೌಷ್ಟಿಕಾಂಶ ಮಿಷನ್ ಮತ್ತು ಮಹಾತ್ಮಾ ಗಾಂಧಿಯವರ 150ನೇ ಹುಟ್ಟುಹಬ್ಬ ವರ್ಷಾಚರಣೆ ಬಗ್ಗೆ ಚರ್ಚೆ