Advertisement

ನೆರವು ಸಾಮಗ್ರಿ ಸ್ವೀಕಾರ ಕೇಂದ್ರ ಆರಂಭ

12:22 PM Aug 18, 2018 | Team Udayavani |

ಮೈಸೂರು: ಕೊಡಗು ಸೇರಿದಂತೆ ವಿವಿಧೆಡೆ ಉಂಟಾಗಿರುವ ನೆರೆ ಹಾವಳಿಗೆ ಸಿಲುಕಿರುವ ಸಂತ್ರಸ್ತರಿಗೆ ತುರ್ತು ಅವಶ್ಯಕ ಸಾಮಗ್ರಿಗಳನ್ನು ನೀಡಲು ಸಾರ್ವಜನಿಕರು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಪುರಭವನದಲ್ಲಿ ಅವಶ್ಯಕ ಸಾಮಗ್ರಿಗಳ ಸ್ವೀಕಾರ ಕೇಂದ್ರವನ್ನು ತೆರೆಯಲಾಗಿದೆ.

Advertisement

ಈ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಮಹಾ ನಗರಪಾಲಿಕೆ ಆರೋಗ್ಯ ಮತ್ತು ಪರಿಸರ ವಿಭಾಗದ ಅಧಿಕಾರಿಗಳನ್ನು ನಿಯೋಜಿಸಿ ಪಾಲಿಕೆ ಆಯುಕ್ತ ಕೆ.ಎಚ್‌.ಜಗದೀಶ್‌ ಆದೇಶ ಹೊರಡಿಸಿದ್ದಾರೆ. ಈ ಸಾಮಗ್ರಿ ಸ್ವೀಕಾರ ಕೇಂದ್ರದಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜು, ಪರಿಸರ ಎಂಜಿನಿಯರ್‌ ಮೈತ್ರಿ, ಆರೋಗ್ಯ ಪರಿವೀಕ್ಷಕರಾದ ಯೋಗೇಶ್‌, ದರ್ಶನ್‌, ಮಂಜುನಾಥ್‌ ಹಾಗೂ ಜಯಂತಿ ಕಾರ್ಯನಿರ್ವಹಿಸಲಿದ್ದಾರೆ.

ದಾನಿಗಳು ಹಾಗೂ ಸಂಘ ಸಂಸ್ಥೆಗಳವರು ನೀಡುವ ತುರ್ತು ಅವಶ್ಯಕ ಸಾಮಗ್ರಿಗಳನ್ನು ಈ ಕೇಂದ್ರದಲ್ಲಿ ಅಧಿಕೃತವಾಗಿ ಸ್ವೀಕರಿಸಲಾಗುವುದು. ದಾನಿಗಳು ನೀಡಿದ ಸಾಮಗ್ರಿಗಳನ್ನು ದಾಖಲಿಸಿಕೊಂಡು ಜಿಲ್ಲಾಡಳಿತದ ಮೂಲಕ ಕೊಡಗು ಹಾಗೂ ಇತರೆ ನೆರೆ ಹಾವಳಿ ಪೀಡಿತ ಪ್ರದೇಶಗಳಿಗೆ ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ತಿಳಿಸಿದ್ದಾರೆ.

ದಾನಿಗಳು, ಸಂಘ ಸಂಸ್ಥೆಗಳವರು ಮಾಹಿತಿಗಾಗಿ ನಗರಪಾಲಿಕೆ ಕಂಟ್ರೋಲ್‌ ರೂಂ ಸಂಖ್ಯೆ: 9449841195/96, 0821-2418800 ಇಲ್ಲಿಗೆ ಸಂಪರ್ಕಿಸಬಹುದು. 

Advertisement

Udayavani is now on Telegram. Click here to join our channel and stay updated with the latest news.

Next