Advertisement

Natural Disaster ಮಳೆ ಹಾನಿ ಪರಿಶೀಲಿಸಿದ ಸಹಾಯಕ ಕಮಿಷನರ್‌

11:51 PM Aug 08, 2024 | Team Udayavani |

ಅರಂತೋಡು: ಪುತ್ತೂರು ಸಹಾಯಕ ಕಮಿಷನರ್‌ಜುಬಿನ್‌ ಮಹೋಪಾತ್ರ ಸಂಪಾಜೆ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದರು.

Advertisement

ಮಳೆಹಾನಿ ಸಂಭವಿಸಿರುವುದು, ಭೂಕುಸಿತ ಸಾಧ್ಯತೆ, ರಸ್ತೆ, ಸೇತುವೆ ಹಾನಿಗಳನ್ನು ವೀಕ್ಷಣೆ ಮಾಡಿ ಪರಿಶೀಲಿಸಿದರು. ಸಂಪಾಜೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗೂನಡ್ಕ ಪೇರಡ್ಕ ರಸ್ತೆಯಲ್ಲಿ ಸಂಪರ್ಕ ಕಲ್ಪಿಸುವ ದರ್ಕಾಸ್‌ ಮುಳುಗು ಸೇತುವೆ ಮಳೆಗಾಲದಲ್ಲಿ ಪಯಸ್ವಿನಿ ನದಿಯಲ್ಲಿ ಪ್ರವಾಹ ಹೆಚ್ಚಾದಾಗ ಆಗಾಗ ಮುಳುಗಡೆಯಗುತ್ತಿದೆ.

ಈ ರಸ್ತೆಯಲ್ಲಿ ನೂರಾರು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ನಿತ್ಯ ಸಂಚಾರ ಮಾಡುತ್ತಿದ್ದು, ನೂರಾರು ಮನೆಗಳಿಗೆ ಸಂಪರ್ಕ ಕಲ್ಪಿಸುವ ಮಂದಿರ ಮಸೀದಿ ಶಾಲಾ ವಿದ್ಯಾರ್ಥಿಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮಳೆಗಾಲದಲ್ಲಿ ಪದೇಪದೆ ಮುಳುಗಡೆಯಾಗುತ್ತಿದೆ.

ಈ ಬಗ್ಗೆ ಹೊಸ ಸೇತುವೆ ನಿರ್ಮಾಣ ಹಾಗೂ ಬದಲಿ ರಸ್ತೆಯಲ್ಲಿ ಸಂಚಾರ ಮಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಪ್ರಾಕೃತಿಕ ವಿಕೋಪದಿಂದ ಹಾಳಾದ ಗ್ರಾಮದ ರಸ್ತೆಗಳಿಗೆ ಅನುದಾನ ದೊರಕಿಸಿಕೊಡಬೇಕು ಎಂದು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಸುಮತಿ ಶಕ್ತಿವೇಲು ಅವರು ಸಹಾಯಕ ಕಮಿಷನರ್‌ಗೆ ಮನವಿ ಸಲ್ಲಿಸಿದರು. ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಸರಕಾರದ ಹಾಗೂ ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ಸಹಾಯಕ ಕಮಿಷನರ್‌ ತಿಳಿಸಿದರು. ಸ್ಥಳದಲ್ಲಿ ಅಗತ್ಯ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಯಿತು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next