Advertisement

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:13 AM Jun 08, 2022 | Team Udayavani |

ಮೇಷ:

Advertisement

ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಅಪೇಕ್ಷಿಸಿದಂತೆ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ಅಭಿವೃದ್ಧಿಗಾಗಿ ಧನವ್ಯಯ ಸಂಭವ.

ವೃಷಭ:

ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಮಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ. ದಂಪತಿಗಳಲ್ಲಿ ಅನುರಾಗ ವೃದ್ಧಿ.

ಮಿಥುನ:

Advertisement

ಅಧ್ಯಯನದಲ್ಲಿ ತಲ್ಲೀನತೆ ಪ್ರಗತಿ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಹೋದ್ಯೋಗಿಗಳಿಂದ ಸಹೋದರ ಸಮಾನ ರಿಂದ ಸಂದರ್ಭೋಚಿತವಾಗಿ ಸಹಾಯ ಸಂಭವ. ಗೃಹದಲ್ಲಿ ಸಣ್ಣಪುಟ್ಟ ಕಿರಿಕಿರಿಗಳು ತೋರಬಹುದು.

ಕರ್ಕ:

ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ತಾಳ್ಮೆಯಿಂದ ಕೆಲಸ ಕಾರ್ಯ ನಿರ್ವಹಿಸಿ. ಆರ್ಥಿಕ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.

ಸಿಂಹ:

ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನಮಾನ.

ಕನ್ಯಾ:

ಸುದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಆಲೋಚಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ಸಾಧಿಸಿದ್ದರಿಂದ ಮಾನಸಿಕ ತೃಪ್ತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ:

ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ದೈಹಿಕವಾಗಿಯೂ ಮಾನಸಿಕವಾಗಿಯೂ ಉತ್ತಮ ಆರೋಗ್ಯ.

ವೃಶ್ಚಿಕ:

ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ. ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸ.

ಧನು:

ಸತ್ಕರ್ಮ ಸದಾಚಾರತೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನಧರ್ಮ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಆರೋಗ್ಯ ವೃದ್ಧಿ. ಮಕ್ಕಳ ವಿಚಾರದಲ್ಲಿ ಸಂತಸ.

ಮಕರ:

ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೇ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ.

ಕುಂಭ:

ನಯ ವಿನಯದಿಂದ ಕಾರ್ಯ ಪ್ರವೃತ್ತರಾಗಿ. ಯಾವುದೇ ಆತುರದ ನಿರ್ಧಾರ ಮಾಡದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಉತ್ತಮ ಧನಸಂಪತ್ತು ವೃದ್ಧಿ. ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು.

ಮೀನ:

ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಪ್ರತಿಸ್ಪರ್ಧಿಗಳಿಗೆ ಅವಕಾಶವಿಲ್ಲದಂತೆ ಕಾರ್ಯಮಗ್ನರಾಗಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ತಾಳ್ಮೆ ಇರಲಿ. ಸಾಂಸಾರಿಕವಾಗಿ ನೆಮ್ಮದಿಯ ದಿನ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ಅನ್ಯರ ವಿಚಾರದಲ್ಲಿ ಜಾಗ್ರತೆ ಇರಲಿ.

Advertisement

Udayavani is now on Telegram. Click here to join our channel and stay updated with the latest news.

Next