Advertisement

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:22 AM Mar 07, 2022 | Team Udayavani |

ಮೇಷ:

Advertisement

ಅಧ್ಯಯನನಿರತರಿಗೆ ಅನುಕೂಲಕರ ದಿನ. ಸರ್ವ ವಿಧದ ಸೌಕರ್ಯ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಮನಃತೃಪ್ತಿ.

ವೃಷಭ:

ಗಣ್ಯ ವ್ಯಕ್ತಿಗಳ ಸಂಪರ್ಕ. ಗೌರವ ಪ್ರತಿಷ್ಠೆ ವೃದ್ಧಿ. ವಿನಯತೆಯಿಂದ ಕೂಡಿದ ಕಾರ್ಯವೈಖರಿ. ಜನಮನ್ನಣೆ ಧಾರ್ಮಿಕ ಕಾರ್ಯಗಳಿಗಾಗಿ ಧನ ವ್ಯಯ. ಮಾನಸಿಕ ಪ್ರಪುಲ್ಲತೆ. ಗೃಹೋಪಕರಣ ವಸ್ತು ಸಂಗ್ರಹ.

ಮಿಥುನ:

Advertisement

ಅತಿಯಾದ ಶ್ರಮ. ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಪಾಲುದಾರರಿಂದ ಉತ್ತಮ ಪ್ರೋತ್ಸಾಹ ಲಭಿಸೀತು. ವಿವೇಕದಿಂದ ಕೂಡಿದ ಕಾರ್ಯವೈಖರಿಯಿಂದ ಪ್ರಗತಿ.

ಕಟಕ:

ಮಕ್ಕಳಿಂದ ಸಂತೋಷ ವೃದ್ಧಿ. ದೇಹಾರೋಗ್ಯ ಉತ್ತಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಉತ್ತಮ ಧನಾರ್ಜನೆ. ಮನೆಯಲ್ಲಿ ಸಂತಸದ ವಾತಾವರಣ.

ಸಿಂಹ:

ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಆರ್ಥಿಕ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಾತಿನಲ್ಲಿ ಸ್ಪಷ್ಟತೆ ಇರಲಿ.

ಕನ್ಯಾ:

ನಿರೀಕ್ಷೆಗೂ ಮೀರಿದ ಧನಾರ್ಜನೆ. ಮಾನಸಿಕ ಸಂತುಷ್ಟತೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ:

ದೂರದ ವ್ಯವಹಾರಗಳಲ್ಲಿ ಪ್ರಗತಿ. ಧನಾಗಮನದ ನಿರೀಕ್ಷೆ. ವಿಳಂಬತೆಯಿಂದ ಪ್ರಾಪ್ತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಶ್ರೇಯಸ್ಸು.

ವೃಶ್ಚಿಕ:

ನಿರೀಕ್ಷಿತ ಸ್ಥಾನ ಗೌರವ ಆದರಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನ ಸಂಪಾದನೆಯಿಂದ ಆತ್ಮ ಸ್ವಾಸ್ಥ್ಯ ವೃದ್ಧಿ.

ಧನು:

ಆರೋಗ್ಯದಲ್ಲಿ ಪ್ರಗತಿ. ಆರ್ಥಿಕ ಧನಾರ್ಜನೆ. ಭೂಮಿ ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ದಾಂಪತ್ಯ ತೃಪ್ತಿದಾಯಕ. ಕುಟುಂಬಿಕರ ಉತ್ತಮ ಸಹಕಾರ, ಪ್ರೋತ್ಸಾಹ.

ಮಕರ:

ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಧನಾರ್ಜನೆಗೆ ಸರಿಯಾಗಿ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ದಾಂಪತ್ಯ ಸುಖ ಉತ್ತಮ. ನೂತನ ಮಿತ್ರರ ಭೇಟಿ.

ಕುಂಭ:
ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ಧನಸಂಪತ್ತು ಪ್ರಾಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪ ವಸ್ತುಗಳ ಸಂಗ್ರಹ. ದೀರ್ಘ‌ ಪ್ರಯಾಣದಿಂದ ದೇಹಾಯಾಸ. ವಿದ್ಯಾರ್ಥಿಗಳಿಗೆ ಸದಾವಕಾಶ.
ಮೀನ:
ಸುದೃಢ ಆರೋಗ್ಯ. ಮಾತಿನಲ್ಲಿ ತಾಳ್ಮೆ ಹಿಡಿತವಿರಲಿ. ಅನಗತ್ಯ ಚರ್ಚೆಗೆ ಒಳಗಾಗಿ ಆರ್ಥಿಕ ನಷ್ಟಕ್ಕೆ ಒಳಗಾಗದಿರಿ. ಪಾಲುದಾರಿಕಾ ಕ್ಷೇತ್ರದಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹವಿರಲಿ. ವಿದ್ಯಾರ್ಥಿಗಳಿಗೆ ಅತ್ಯುತ್ತಮ ದಿನ.
Advertisement

Udayavani is now on Telegram. Click here to join our channel and stay updated with the latest news.

Next