Advertisement

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:08 AM Apr 25, 2022 | Team Udayavani |

ಮೇಷ:

Advertisement

ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಅನಗತ್ಯ ಸ್ಪರ್ದೆ ಮಾಡದಿರಿ. ಅನಿರೀಕ್ಷಿತ ಧನಾಗಮ. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಯಿಂದ ಮುನ್ನಡೆ ಸಂಭವಿಸೀತು. ಗುರುಹಿರಿಯರಿಂದ ಸುಖ. ದಾಂಪತ್ಯದಲ್ಲಿ ಅನುರಾಗ ವೃದ್ಧಿ

ವೃಷಭ:

ಉತ್ತಮ ಆರೋಗ್ಯ. ಸದಾ ಸಂಚಾರಶೀಲತೆ. ಬಹುಜನ ಸಂಪರ್ಕ. ಹಲವು ವಿಧದಲ್ಲಿ ಧನಲಾಭ. ದೂರದ ವ್ಯವಹಾರದಲ್ಲಿ ಅನ್ಯರ ಸಹಾಯದಿಂದ ಪ್ರಗತಿ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ತೃಪ್ತಿ. ಗುರು ಹಿರಿಯರ ಮಾರ್ಗದರ್ಶನ.

ಮಿಥುನ:

Advertisement

ಮಾತಾ ಪಿತೃಗಳಿಂದಲೂ ಹಿರಿಯರಿಂದಲೂ ಸುಖ ಸಿದ್ಧಿ. ಎಲ್ಲರಿಗೂ ಪ್ರೀತಿ ಪಾತ್ರ. ಆರೋಗ್ಯ ಉತ್ತಮ. ವಿದೇಶ ಮೂಲದಿಂದ ಧನಾಗಮ. ಸಹೋದ್ಯೋಗಿಗಳ ಸಹೋದರ ಸಮಾನರಿಂದ ವ್ಯವಹಾರಗಳಲ್ಲಿ ಸಹಕಾರ. ದಾಂಪತಿಗಳು ಚರ್ಚೆಗೆ ಅವಕಾಶ ನೀಡದಿರಿ.

ಕರ್ಕ:

ದೈಹಿಕವಾಗಿಯೂ, ಮಾನಸಿಕವಾಗಿಯೂ ಸುದೃಢ ಆರೋಗ್ಯ. ಉತ್ಸಾಹಶೀಲತೆ, ಭೂಮಿ ಆಸ್ತಿ ವಿಚಾರದಿಂದ ಧನಲಾಭ. ಧಾರ್ಮಿಕ ವಿಚಾರಗಳಿಂದಲೂ ಸರಕಾರೀ ವ್ಯವಹಾರಗಳಿಂದ ತೃಪ್ತಿ. ಸಂಸಾರದಲ್ಲಿ ಅನುರಾಗ ವೃದ್ಧಿ. ಹಿರಿಯರ ಬಗ್ಗೆ ಗಮನಿಸಿ. ಉತ್ತಮ ವಾಕ್‌ ಚತುರತೆ.

ಸಿಂಹ:

ಅಧ್ಯಯನದಲ್ಲಿ ಆಸಕ್ತಿ. ಉತ್ತಮ ವಾಕ್‌ ಚತುರತೆ. ಸರ್ವಜನರ ಮಾನ್ಯತೆ. ಆರೋಗ್ಯ ಗಮನಿಸಿ. ಜವಾಬ್ದಾರಿಯುತ ಕೆಲಸ ಕಾರ್ಯಗಳಿಂದ ಧನಾಗಮ. ಕೆಲವೊಮ್ಮೆ ಕುಕೃತ್ಯ ಮಾಡುವ ಸಂಭವ ಎದುರಾದೀತು. ಗುರುಹಿರಿಯರ ಸಹಾಯ.

ಕನ್ಯಾ:

ಸುದೃಢ ಆರೋಗ್ಯ. ಬುದ್ಧಿವಂತಿಕೆ ವೃದ್ಧಿ. ಪರರಿಗೆ ಆರ್ಥಿಕ ಸಹಾಯ ಮಾಡುವಾಗ ಎಚ್ಚರ ವಹಿಸುವುದರಿಂದ ಅನಾಹುತ ತಪ್ಪೀತು. ವ್ಯವಹಾರಗಳಲ್ಲಿ ಮಾನ್ಯತೆ. ದೀರ್ಘ‌ ಪ್ರಯಾಣ .

ತುಲಾ:

ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ವೃದ್ಧಿ, ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃಸಂತೋಷ.

ವೃಶ್ಚಿಕ:

ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿ ಅವಕಾಶಗಳು ದೊರಕುವುದು. ಎಲ್ಲಾ ವಿಚಾರದಲ್ಲೂ ಜಾಗ್ರತೆಯ ನಡೆ ಅಗತ್ಯ.

ಧನು:

ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧ್ಯಯನ ಪ್ರವೃತ್ತರಿಗೆ ಸರ್ವ ವಿಧದ ಸೌಲಭ್ಯ ಲಭ್ಯ. ಆರೋಗ್ಯ ಉತ್ತಮ.

ಮಕರ:

ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ ಮೇಲಧಿಕಾರಿಗಳ ಸಹಾಯ ಸಹಕಾರದಿಂದ ಪ್ರಗತಿ. ದೀರ್ಘ‌ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ. ಹಿರಿಯರ ಮಾರ್ಗದರ್ಶನ.

ಕುಂಭ:

ಆರೋಗ್ಯ ಉತ್ತಮ. ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫ‌ಲತೆ, ಶ್ರೇಯಸ್ಸು ತೋರಿಬರುವುವು. ದೂರದ ವ್ಯವಹಾರದಿಂದ ಧನ ವೃದ್ಧಿ. ಸ್ಥಾನಲಾಭ. ಗೃಹದಲ್ಲಿ ಸಂತಸದ ವಾತಾವರಣ.

ಮೀನ:

ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ. ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ, ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದಂಪತಿಗಳಲ್ಲಿ ಪರಸ್ಪರ ಅನ್ಯೋನ್ಯತೆ. ಮಕ್ಕಳಿಂದ ಸುಖ ಸಂತೋಷ.

Advertisement

Udayavani is now on Telegram. Click here to join our channel and stay updated with the latest news.

Next