Advertisement

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:06 AM Jul 04, 2022 | Team Udayavani |

ಮೇಷ:

Advertisement

ಕರ್ತವ್ಯ ನಿಷ್ಠೆ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಜನಮನ್ನಣೆ. ಉತ್ತಮ ಧನಾರ್ಜನೆ. ಸ್ಪರ್ದೆಗಳಲ್ಲಿ ಜಯ. ಗುರುಹಿರಿಯರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ವೃಷಭ:

ಉತ್ತಮ ವಾಕ್‌ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಹೆಚ್ಚಿನ ಧನಸಂಪತ್ತು ವೃದ್ಧಿ. ಪಾಲುದಾರರೊಂದಿಗೆ ತಾಳ್ಮೆಯಿಂದ ಸಹಕರಿಸಿ. ದೂರದ ಸ್ಥಳದಿಂದ ಜ್ಞಾನ ಸಂಪಾದನೆ. ಮನೆಯಲ್ಲಿ ಸಂಭ್ರಮ ಪರಿಸ್ಥಿತಿ.

ಮಿಥುನ:

Advertisement

ಧಾರ್ಮಿಕ ಕಾರ್ಯಗಳಲ್ಲಿ ಮಗ್ನತೆ. ವಿದ್ಯಾರ್ಜನೆಯಲ್ಲಿಯೂ ಮಕ್ಕಳಲ್ಲಿಯೂ ಸಮಯ ಕಳೆಯುವಿಕೆ. ಸಾಹಸ ಪ್ರವೃತ್ತಿಯಿಂದಲೂ ಬುದ್ಧಿವಂತಿಕೆಯಿಂದಲೂ ಗೌರವ ಸ್ಥಾನ ಪ್ರಾಪ್ತಿ. ದಾಂಪತ್ಯ ತೃಪ್ತಿಕರ. ಮನೆಯ ನಿಮಿತ್ತ ಹೆಚ್ಚಿನ ಜವಾಬ್ದಾರಿ.

ಕರ್ಕ:

ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ತಾಳ್ಮೆಯಿಂದ ಕೆಲಸ ಕಾರ್ಯ ನಿರ್ವಹಿಸಿ. ಆರ್ಥಿಕ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.

ಸಿಂಹ:

ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನಮಾನ.

ಕನ್ಯಾ:

ಸುದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಆಲೋಚಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ಸಾಧಿಸಿದ್ದರಿಂದ ಮಾನಸಿಕ ತೃಪ್ತಿ. ಬಂಧುಮಿತ್ರರ ಸಹಕಾರ ಗೃಹದಲ್ಲಿ ಸಂತಸದ ವಾತಾವರಣ.

ತುಲಾ:

ಆರೋಗ್ಯ ಉತ್ತಮ. ನಿರಂತರ ಧನಾರ್ಜನೆ. ಪ್ರಯಾಣದಿಂದ ನಿರೀಕ್ಷಿತ ಕಾರ್ಯ ಸಫ‌ಲತೆ. ಉದ್ಯೋಗ ವ್ಯವಹಾರಗಳಲ್ಲಿ ಸಹಚರರೊಂದಿಗೆ ಸಮಾದಾನ ತಾಳ್ಮೆ ಅಗತ್ಯ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಸಂತಸ.

ವೃಶ್ಚಿಕ:

ಆರೋಗ್ಯ ಸುದೃಢ. ಸಾಂಸಾರಿಕ ಸಂತೋಷ ವೃದ್ಧಿ. ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಮಕ್ಕಳ ವಿಚಾರದಲ್ಲಿ ಧನವ್ಯಯ. ಗುರುಹಿರಿಯರಿಂದ ಮಾನಸಿಕ ಸಂತೋಷ ವೃದ್ಧಿ ದೇವತಾ ಕಾರ್ಯಗಳಿಗೆ ಪ್ರಯಾಣ ಸಂಭವ.

ಧನು:

ಸುಸ್ಥಿರ ಆರೋಗ್ಯ. ಸರಿಯಾದ ನಿಯಮ ಶಿಸ್ತಿನಿಂದ ಕೂಡಿದ ಜೀವನ ಶೈಲಿ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಸಂತೋಷ. ಗೃಹೋಪವಸ್ತುಗಳ ಸಂಗ್ರಹ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ನಾಯಕತ್ವಗುಣ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಮ್ಮೆ .

ಮಕರ:

ಶಾರೀರಿಕ ಮಾನಸಿಕ ಆರೋಗ್ಯ ಸುದೃಢ. ಬಹುಜನರೊಂದಿಗೆ ಸಮಯ ವಿನಿಯೋಗಿಸುವ ಸಂದರ್ಭ. ಜನಮನ್ನಣೆ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಬೆಳವಣಿಗೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಶಿಸ್ತು. ಮಕ್ಕಳ ಅಭಿವೃದ್ಧಿಗೆ ಗಮನ.

ಕುಂಭ:

ಉದಾಸೀನತೆ ಮಾಡದೆ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರ ಪ್ರದರ್ಶನ. ಸ್ಥಾನಮಾನ ಗೌರವಾದಿ ವೃದ್ಧಿ. ಉತ್ತಮ ಧನ ಸಂಚಯನ. ಸಹೋದರಾದಿ ವರ್ಗದವರಿಂದ ಮಾನಸಿಕ ನೆಮ್ಮದಿ. ಧಾರ್ಮಿಕ ಚಟುವಟಿಕೆ‌ಗಳಲ್ಲಿ ಸಕ್ರೀಯ ನಡೆ.

ಮೀನ:

ವ್ಯವಹಾರ ಉದ್ಯೋಗ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯವನ್ನು ಕಡೆಗಣಿಸದಿರಿ. ವಿಪುಲ ಧನಸಂಪತ್ತು ವೃದ್ಧಿ. ಧಾರ್ಮಿಕ ಚಟುವಟಿಕೆಗಳಿಗೆ ಸತ್ಕರ್ಮಕ್ಕೆ ಧನವ್ಯಯ. ಸಂಶೋಧಕರಿಗೆ ಅಧ್ಯಯನ ಪ್ರವೃತ್ತರಿಗೆ ಮನ್ನಣೆ. ಸರಕಾರಿ ಸೌಲಭ್ಯ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ.

Advertisement

Udayavani is now on Telegram. Click here to join our channel and stay updated with the latest news.

Next