Advertisement

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:15 AM Mar 31, 2022 | Team Udayavani |

ಮೇಷ:

Advertisement

ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆಗಳು ನಿವಾರಣೆಯಾಗಿ ನೆಮ್ಮದಿ. ನಿರೀಕ್ಷಿತ ಸಫ‌ಲತೆ. ಉತ್ತಮ ಧನ ಸಂಗ್ರಹ. ಬಂಧುಮಿತ್ರರ ಸಹಾಯ ಸಹಕಾರ ಪ್ರಾಪ್ತಿ. ಮಕ್ಕಳ ನಿಮಿತ್ತ ಪ್ರಯಾಣ ಖರ್ಚು ಸಂಭವ.

ವೃಷಭ:

ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ಧನವ್ಯಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರಗಳಲ್ಲಿ ಪ್ರಗತಿ.

ಮಿಥುನ:

Advertisement

ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಲಭಿಸೀತು. ದೂರದ ವ್ಯವಹಾರದಿಂದ ಉತ್ತಮ ಧನಸಂಪತ್ತು ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ.

ಕಟಕ:

ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಸಾಧ್ಯ. ಗುರುಹಿರಿಯರ ರಕ್ಷೆಯಿಂದ ಕಾರ್ಯ ಸಫ‌ಲತೆ.

ಸಿಂಹ:

ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಜನಪದ ರೊಂದಿಗೆ ತಾಳ್ಮೆಯಿಂದ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಅನ್ಯಥಾ ಚರ್ಚೆಗೆ ಆಸ್ಪದ ನೀಡದಿರಿ. ಧನಾರ್ಜನೆಗೆ ಕೊರತೆ ಕಾಣದು.

ಕನ್ಯಾ:

ದೀರ್ಘ‌ ಪ್ರಯಾಣ ಸಂಭವ. ದೇಹಾಯಾಸ ತೋರೀತು. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ.

ತುಲಾ:

ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ಉತ್ತಮ ವಾಕ್‌ ಚತುರತೆಯಿಂದಲೂ ಜವಾಬ್ದಾರಿಯಿಂದಲೂ ಕೂಡಿದ ಕಾರ್ಯ ವೈಖರಿ.

ವೃಶ್ಚಿಕ:

ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ.

ಧನು:

ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ ಧನ ಲಾಭ. ಉತ್ತಮ ವಾಕ್‌ಚತುರತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ.

ಮಕರ:

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿ ಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ ಸಂತೋಷ. ದಂಪತಿಗಳಲ್ಲಿ ಅನ್ಯೋನ್ಯತೆಗೆ ಕೊರತೆಯಾಗದಂತೆ ವ್ಯವಹರಿಸಿ.

ಕುಂಭ:

ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋ ದ್ಯೋಗಿಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ.

ಮೀನ:

ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ. ಮನೆಯಲ್ಲಿ ಸಂತಸದ ವಾತಾವರಣ.

Advertisement

Udayavani is now on Telegram. Click here to join our channel and stay updated with the latest news.

Next