Advertisement

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:21 AM Feb 28, 2022 | Team Udayavani |

ಮೇಷ:

Advertisement

ಹಿರಿಯರಿಂದ ಸುಖ ಸಂತೋಷ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸ್ವಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.

ವೃಷಭ:

ದೈರ್ಯ ಶೌರ್ಯ ಪರಾಕ್ರಮದಿಂದ ಕೂಡಿದ ಸ್ವಾಭಿಮಾನಕ್ಕೆ ದಕ್ಕೆಯಾಗದಂತೆ ಕಾರ್ಯ ವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ, ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.

ಮಿಥುನ:

Advertisement

ಸಂಶೋದನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.

ಕಟಕ:

ಸಾಂಸಾರಿಕ ಸುಖ ವೃದ್ಧಿ. ದಂಪತಿಗಳಲ್ಲಿ ಅನುರಾಗ ಹೆಚ್ಚಾದೀತು. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಪ್ರಾಪ್ತಿ.

ಸಿಂಹ:

ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ ಸುಖ ಸಂತೋಷ. ದೂರದ ವ್ಯವಹಾರದಲ್ಲಿ ಪ್ರಗತಿ. ಸ್ಥಾನ ಸುಖಾದಿ ಲಭ್ಯ.

ಕನ್ಯಾ:

ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ, ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿ ಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.

ತುಲಾ:

ದೀರ್ಘ‌ ಪ್ರಯಾಣ ಅಧ್ಯಯನದಲ್ಲಿ ತತ್ಪರತೆ. ದಾರ್ಮಿಕ ವಿಚಾರಗಳಲ್ಲಿ ಪಾಲ್ಗೊಳ್ಳುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖದಲ್ಲಿ ಸಂತೋಷ ವೃದ್ಧಿ. ಪರಸ್ಪರ ಸಹಕಾರ.

ವೃಶ್ಚಿಕ:

ಉದಾರತೆ ದೈರ್ಯ ಪರಾಕ್ರಮದಿಂದ ಕೂಡಿದ ದಿನಚರಿ. ಸ್ಪರ್ದೆಗಳಲ್ಲಿ ಜಯ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಹಣಕಾಸಿನ ವಿಚಾರದಲ್ಲಿ ಏರಿಳಿತ ಸಂಭವ. ದಾಂಪತ್ಯ ತೃಪ್ತಿಕರ.

ಧನು:

ಆರೋಗ್ಯ ವೃದ್ಧಿ. ಬಂಧುಮಿತ್ರರ ಭೇಟಿ. ಗುರುಹಿರಿಯರ ಆಶೀರ್ವಾದ. ದೂರ ಪ್ರಯಾಣಕ್ಕೆ ದೇವತಾ ಸ್ಥಳ ಸಂದರ್ಶನಕ್ಕೆ ಅವಕಾಶ ಒದಗಿ ಬಂದೀತು. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ.

ಮಕರ:

ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಉತ್ತಮ ಬೆಳವಣಿಗೆ ಮತ್ತು ಮಕ್ಕಳೊಂದಿಗೆ ಸಂತೋಷದ ಸಮಯ. ಗುರುಹಿರಿಯರಲ್ಲಿ ಚರ್ಚೆ ಸಂಭವ.

ಕುಂಭ:

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿಸಿದಂತೆ ಸ್ಥಾನ ಗೌರವಾದಿ ಲಭಿಸಿದ ಖುಷಿ. ಸ್ಪರ್ಧೆಗಳಿಂದ ಜಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಸನ್ನಿವೇಶ. ಸಾಂಸಾರಿಕ ಸುಖದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ.

ಮೀನ:

ಉತ್ತಮ ಆರೋಗ್ಯ. ಸ್ವಪ್ರಯತ್ನದಿಂದ ಕೂಡಿದ ಕಾರ್ಯ ವೈಖರಿ. ಭೂಮ್ಯಾದಿ ವಿಚಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿದಾಯಕ. ಆರ್ಥಿಕ ಅಭಿವೃದ್ಧಿ. ಮಿತ್ರರಿಂದ ಸಹಕಾರ.ದೂರ ಪ್ರಯಾಣದಲ್ಲಿ ವಿಳಂಬ. ಅನ್ಯರ ಸಹಾಯ ನಿರೀಕ್ಷಿಸದಿರಿ.

Advertisement

Udayavani is now on Telegram. Click here to join our channel and stay updated with the latest news.

Next