Advertisement

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:20 AM Mar 02, 2022 | Team Udayavani |

ಮೇಷ:

Advertisement

ಮನೆಯಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ಖರ್ಚಿನಲ್ಲಿ ಮಿತವಿರಲಿ. ಅನ್ಯರ ಸಹಾಯ ಅಪೇಕ್ಷಿಸದಿರಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತಸ. ಉದ್ಯೋಗದಲ್ಲಿ ಸಂತೃಪ್ತಿ ಭಾವ ನಿಮ್ಮದಾಗಲಿದೆ.

ವೃಷಭ:

ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಮಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ. ದಂಪತಿಗಳಲ್ಲಿ ಅನುರಾಗ ವೃದ್ಧಿ.

ಮಿಥುನ:

Advertisement

ಅಧ್ಯಯನದಲ್ಲಿ ತಲ್ಲೀನತೆ ಪ್ರಗತಿ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಹೋದ್ಯೋಗಿಗಳಿಂದ ಸಹೋದರ ಸಮಾನ ರಿಂದ ಸಂದಭೋìಚಿತವಾಗಿ ಸಹಾಯ ಸಂಭವ. ಗೃಹದಲ್ಲಿ ಸಣ್ಣ ಪುಟ್ಟ ಕಿರಿಕಿರಿಗಳು ತೋರಿಬರಬಹುದು.

ಕಟಕ:

ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ತಾಳ್ಮೆಯಿಂದ ಕೆಲಸ ಕಾರ್ಯ ನಿರ್ವಹಿಸಿ. ಆರ್ಥಿಕ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.

ಸಿಂಹ:

ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನಮಾನ. ದೈಹಿಕ ಹೆಚ್ಚಿದ ದೇಹಾಯಾಸ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು.

ಕನ್ಯಾ:

ಸುದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಆಲೋಚಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ಸಾಧಿಸಿದ್ದರಿಂದ ಮಾನಸಿಕ ತೃಪ್ತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ:

ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ವೃದ್ಧಿ. ದೇವತಾ ಕಾರ್ಯಗಳಲ್ಲಿ ಭಾಗಿ.

ವೃಶ್ಚಿಕ:

ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನ ಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.

ಧನು:

ಆರೋಗ್ಯ ವೃದ್ಧಿ. ಸತ್ಕರ್ಮ ಸದಾಚಾರತೆ. ದೇವತಾ ಕಾರ್ಯಗಳಲ್ಲಿ ಭಾಗಿ ಯಾಗಿ ದಾನ ಧರ್ಮ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಧನಾರ್ಜನೆ ವೃದ್ಧಿ.

ಮಕರ:
ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಅನ್ಯರ ಸಹಾಯ ನಿರೀಕ್ಷಿಸದೆ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ.
ಕುಂಭ:
ನಯವಿನಯದಿಂದ ಕಾರ್ಯ ಪ್ರವೃತ್ತರಾಗಿ. ಯಾವುದೇ ಆತುರದ ನಿರ್ಧಾರ ಮಾಡದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಉತ್ತಮ ಧನ ಸಂಪತ್ತು ವೃದ್ಧಿ.
ಮೀನ:
ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಪ್ರತಿಸ್ಪರ್ಧಿಗಳಿಗೆ ಅವಕಾಶವಿಲ್ಲದಂತೆ ಕಾರ್ಯಮಗ್ನರಾಗಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಇರಲಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ. ಗುರುಹಿರಿಯರ ಮಾತಿನಲ್ಲಿ ಗೌರವವಿರಲಿ. ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು.
Advertisement

Udayavani is now on Telegram. Click here to join our channel and stay updated with the latest news.

Next