Advertisement

ಎಲ್ಲ ತಾಲೂಕು ಕೇಂದ್ರಗಳಲ್ಲಿ ಕಮಾಂಡ್‌ ಸೆಂಟರ್‌ ಸ್ಥಾಪನೆ

11:49 AM Apr 18, 2020 | Team Udayavani |

ಧಾರವಾಡ: ಕೋವಿಡ್‌ಯೇತರ ಚಿಕಿತ್ಸೆಗಳನ್ನು ನಿರಂತರವಾಗಿ ಮುಂದುವರಿಸುತ್ತಿರುವ ಬಗ್ಗೆ ನಿಗಾ ವಹಿಸಲು ಎಲ್ಲ ತಾಲೂಕು ಕೇಂದ್ರಗಳಲ್ಲಿ ಕಮಾಂಡ್‌ ಸೆಂಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಡಿಸಿ ದೀಪಾ ಚೋಳನ್‌ ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್ 19 ನಿಯಂತ್ರಣ ಕಾರಣದಿಂದ ಉಳಿದ ಖಾಯಿಲೆಗಳಾದ ಕ್ಷಯರೋಗ, ಕುಷ್ಟರೋಗ ಮಧುಮೇಹ, ರಕ್ತದೊತ್ತಡ, ಅಪೌಷ್ಟಿಕತೆ ನಿವಾರಣೆಯಂತಹ ಚಟುವಟಿಕೆಗಳು ನಿರ್ಲಕ್ಷ್ಯಕ್ಕೊಳಗಾಗ ಬಾರದೆಂಬ ಉದ್ದೇಶದೊಂದಿಗೆ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕಮಾಂಡ್‌ ಸೆಂಟರ್‌ಗಳನ್ನು ಸ್ಥಾಪಿಸಿ ಇಂತಹ ಚಿಕಿತ್ಸೆಗಳ ಮೇಲೆ ನಿಗಾ ಇಡಲಾಗುತ್ತಿದೆ. ತೀವ್ರ ಉಸಿರಾಟ ತೊಂದರೆ, ಜ್ವರ, ಕೆಮ್ಮು, ಕಫದಂತಹ ಸಮಸ್ಯೆಗಳಿದ್ದರೆ ಅವುಗಳನ್ನು ಗುರುತಿಸಿ ತಕ್ಷಣ ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕರು ಜಿಲ್ಲಾ ಕಂಟ್ರೋಲ್‌ ರೂಂಗೆ ಮಾಹಿತಿ ನೀಡುತ್ತಾರೆ. 60 ವರ್ಷ ಮೇಲ್ಪಟ್ಟವರು ಹಾಗೂ ಖಾಸಗಿ ಆಸ್ಪತ್ರೆಗಳ ಸೇವೆಯನ್ನು ಸಹ ಇಲ್ಲಿ ವಿಶ್ಲೇಷಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next