Advertisement

21ದಿನ ಲಾಕ್ ಡೌನ್;Covid ಸೋಂಕಿತ ವ್ಯಕ್ತಿ ಅಂತ್ಯ ಸಂಸ್ಕಾರ ಕುಟುಂಬ ವರ್ಗಕ್ಕೆ ಅವಕಾಶ ಇಲ್ಲ

09:47 AM Mar 31, 2020 | Nagendra Trasi |

ಹೈದರಾಬಾದ್:ದೇಶದಲ್ಲಿ ಮಾರಣಾಂತಿಕ ಕೋವಿಡ್ 19 ಸೋಂಕಿಗೆ 29 ಮಂದಿ ಸಾವನ್ನಪ್ಪಿದ್ದು, ಸಾವಿರಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ. ಏತನ್ಮಧ್ಯೆ ಹೈದರಬಾದ್ ನಲ್ಲಿ ಶನಿವಾರ ಸಾವನ್ನಪ್ಪಿರುವ 74ವರ್ಷದ ತೆಲಂಗಾಣದ ವ್ಯಕ್ತಿಯ ರಕ್ತ ಮಾದರಿಯನ್ನು ಪರೀಕ್ಷಿಸಿದಾಗ ಕೋವಿಡ್ 19 ಸೋಂಕು ಇದ್ದಿರುವುದು ಪತ್ತೆಯಾಗಿದೆ. ನಂತರ ಆ ವ್ಯಕ್ತಿಯ ಶವ ಸಂಸ್ಕಾರ ನಡೆಸಲು ಕುಟುಂಬ ಸದಸ್ಯರಿಗೆ ಅವಕಾಶ ನೀಡದೆ ಕೇವಲ ವೈದ್ಯಕೀಯ ಸಿಬ್ಬಂದಿಗಳ ಸಮ್ಮುಖದಲ್ಲಿ ನಡೆಸಿರುವುದಾಗಿ ವರದಿ ತಿಳಿಸಿದೆ.

Advertisement

ಈ ವೃದ್ಧನ ಮನೆಯವರನ್ನು ಇದೀಗ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 21ದಿನಗಳ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಎಲ್ಲಿಯಾದರು ಸಾವು ಸಂಭವಿಸಿದರೆ 20 ಜನಕ್ಕಿಂತ ಹೆಚ್ಚು ಮಂದಿ ಸೇರಲು ಅವಕಾಶ ಇಲ್ಲ ಎಂಬ ಸೂಚನೆ ಇದ್ದಿರುವುದಾಗಿ ವರದಿ ಹೇಳಿದೆ.

ಈ ವ್ಯಕ್ತಿಗೆ ಕೋವಿಡ್ 19 ಸೋಂಕು ಇದ್ದಿರುವುದು ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಬಳಿಕ ತಿಳಿದು ಬಂದಿದ್ದು, ವೃದ್ಧನಿಗೆ ಇತರ ಅನಾರೋಗ್ಯ ಕೂಡಾ ಇದ್ದಿರುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಚಂದ್ರಶೇಖರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 70ಕ್ಕೆ ಏರಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next