Advertisement

ಕಲ್ಲು ಗಣಿಯಲ್ಲಿ ಕೆಲಸ ಮಾಡುವ ವೇಳೆ ಸ್ಫೋಟ : ಹತ್ತು ಮಂದಿ ಕಾರ್ಮಿಕರು ಸಾವು

12:37 PM May 08, 2021 | Team Udayavani |

ಆಂಧ್ರಪ್ರದೇಶ : ಆಂಧ್ರಪ್ರದೇಶದ ಕಡಪದ ಕಲ್ಲುಗಣಿಯಲ್ಲಿ ನಡೆದ ಸ್ಫೋಟದಲ್ಲಿ ಹತ್ತು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಬೆಳಿಗ್ಗೆ ಮಾಮಿಲ್ಲಪಲ್ಲೆ ಗ್ರಾಮದ ಸಮೀಪ ಈ ಅವಘಡ ಸಂಭವಿಸಿದೆ.

Advertisement

ಕಾರ್ಮಿಕರು ಬಂಡೆಯನ್ನು ಕೊರೆಯುವ ವೇಳೆ ಈ ಘಟನೆ ನಡೆದಿದೆ. ಗಣಿಯಲ್ಲಿ ಕಲ್ಲು ಸಿಡಿಸಲು ರಂಧ್ರಗಳನ್ನು ಕೊರೆಯುವ ವೇಳೆ ಈ ಘಟನೆ ಸಂಭವಿದೆ ಎಂದು ತಿಳಿದು ಬಂದಿದೆ.

ಸ್ಪೋಟದಿಂದ ಬಲಿಯಾದವರಲ್ಲಿ ಹೆಚ್ಚಿನವರು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸ್ಥಳೀಯ ಗ್ರಾಮವಾದ ಪುಲಿವೆಂಡುಲ ಮೂಲದವರು ಎಂದು ಹೇಳಲಾಗುತ್ತಿದೆ. ಈ ಸ್ಫೋಟ ಎಷ್ಟು ತೀವ್ರವಾಗಿತ್ತೆಂದರೆ ಪಕ್ಕದ ಹಳ್ಳಿಗಳಲ್ಲಿ ಕೂಡ ನಡುಕ ಉಂಟುಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next