Advertisement

ಕರಾಚಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ 11 ಕಾರ್ಮಿಕರನ್ನು ಅಪಹರಿಸಿ ಭೀಕರ ಕೊಲೆ!

06:58 PM Jan 03, 2021 | Team Udayavani |

ಕರಾಚಿ: ಪಾಕಿಸ್ತಾನದ ಅಲ್ಪಸಂಖ್ಯಾತ ಶಿಯಾ ಹಜಾರಾ ಸಮುದಾಯದ 11 ಕಲ್ಲಿದ್ದಲು ಗಣಿಗಾರಿಕೆ ಕಾರ್ಮಿಕರನ್ನು ಭಾನುವಾರ ಬಂದೂಕುಧಾರಿಗಳು ಅಪಹರಿಸಿ, ಕೊಲೆಗೈದಿದ್ದಾರೆ.

Advertisement

ಬಲೂಚಿಸ್ತಾನದ ನೈರುತ್ಯ ಪ್ರಾಂತ್ಯದಲ್ಲಿ ಈ ಅಮಾನವೀಯ ಕೃತ್ಯ ನಡೆದಿದ್ದು, ಅಪಹೃತರನ್ನು ಹತ್ತಿರದ ಪರ್ವತವೊಂದಕ್ಕೆ ಕರೆದೊಯ್ದು ಅಲ್ಲಿ ಗುಂಡಿನ ಮಳೆಗರೆದು ಎಲ್ಲರನ್ನೂ ಹತ್ಯೆಗೈಯ್ಯಲಾಗಿದೆ.

ಮಾಚ್‌ ಕಲ್ಲಿದ್ದಲು ಕ್ಷೇತ್ರದಲ್ಲಿ ಕೆಲಸ ಮಾಡಲೆಂದು ಗಣಿ ಕಾರ್ಮಿಕರು ತೆರಳುತ್ತಿದ್ದಾಗ, ಬಂದೂಕುಧಾರಿಗಳು ಇವರನ್ನು ಅಪಹರಿಸಿದ್ದರು. ನಂತರ ಪರ್ವತ ಪ್ರದೇಶಕ್ಕೆ ಕರೆದೊಯ್ದು ಗುಂಡಿನ ದಾಳಿ ನಡೆಸಿದ್ದರು. 6 ಕಾರ್ಮಿಕರು ಸ್ಥಳದಲ್ಲೇ ಅಸುನೀಗಿದರೆ, ಐವರು ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:ಅಯೋಧ್ಯೆ ರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹಣಾ ಕಾಪು ತಾಲೂಕು ಕಾರ್ಯಾಲಯ ಉದ್ಘಾಟನೆ

ಶಿಯಾ ಹಜಾರಾ ಸಮುದಾಯವನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗಿದೆ. ಘಟನೆ ಖಂಡಿಸಿರುವ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌, ಇದನ್ನು ಅತ್ಯಂತ ಹೇಡಿತನದ ಭಯೋತ್ಪಾದನಾ ಕೃತ್ಯ ಎಂದು ಬಣ್ಣಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next