Advertisement

ಚಾಲಕನ ನಿಯಂತ್ರಣ ಕಳೆದು 300 ಅಡಿ ಪ್ರಪಾತಕ್ಕೆ ಉರುಳಿದ ಬಸ್ : 14 ಮಂದಿ ಸಾವು, 4 ಮಂದಿ ಗಂಭೀರ

03:28 PM Oct 31, 2021 | Team Udayavani |

ಡೆಹ್ರಾಡೂನ್‌ : ಪ್ರಯಾಣಿಕರನ್ನು ತುಂಬಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 300 ಅಡಿ ಪ್ರಪಾತಕ್ಕೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ ಹದಿನಾಲ್ಕು ಮಂದಿ ಸಾವನ್ನಪ್ಪಿ ನಾಲ್ಕು ಮಂದಿ ಗಂಭೀರ ಗಾಯಗೊಂಡ ಘಟನೆ ಡೆಹ್ರಾಡೂನ್ ಪ್ರದೇಶದ ಚಕ್ರತಾ ಎಂಬಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ.

Advertisement

ಡೆಹ್ರಾಡೂನ್ ಜಿಲ್ಲೆಯ ಚಕ್ರತಾದ ಬುಲ್ಹಾದ್- ಬೈಲಾ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ ಸೂಚಿಸಿದ್ದು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಮತ್ತು ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next