Advertisement

Billavas: ವರ್ಷಾಂತ್ಯಕ್ಕೆ ಕರಾವಳಿಯಲ್ಲಿ ಬಿಲ್ಲವರ ಬೃಹತ್‌ ಸಮಾವೇಶ

11:38 PM Sep 05, 2023 | Team Udayavani |

ಬೆಂಗಳೂರು: ನಗರದ ಅರಮನೆ ಮೈದಾನದ ವೈಟ್‌ಪೆಟಲ್ಸ್‌ ಸಭಾಂಗಣದಲ್ಲಿ ಸೆ. 9ರಂದು ಈಡಿಗ, ಬಿಲ್ಲವ, ನಾಮಧಾರಿ, ದೀವರ ಸಮುದಾಯದ ಸಮಾನ ಮನಸ್ಕರ ಪೂರ್ವಭಾವಿ ಸಭೆ ನಡೆಯಲಿದೆ ಎಂದು ವಿ.ಪ. ಮಾಜಿ ಸದಸ್ಯ, ಈಡಿಗ ಮುಖಂಡ ಎಚ್‌.ಆರ್‌. ಶ್ರೀನಾಥ್‌ ಹೇಳಿದರು.

Advertisement

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 10 ಗಂಟೆಗೆ ಸಭೆ ನಡೆಯಲಿದೆ. ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಶ್ರೀ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಈಡಿಗ ಮಹಾಮಂಡಲದ ಅಧ್ಯಕ್ಷ ಪ್ರಣವಾನಂದ, ಸೋಲೂರಿನ ಆರ್ಯ ಈಡಿಗ ಮಹಾಸಂಸ್ಥಾನ ಪೀಠದ ವಿಖ್ಯಾತನಂದ ಶ್ರೀ ಸೇರಿ ರಾಜ್ಯ ಹಿಂದುಳಿದ ವರ್ಗಗಳ ಸಮುದಾಯಗಳ ಮಠಾಧೀಶರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ನವೆಂಬರ್‌ ಇಲ್ಲವೇ ಡಿಸೆಂಬರ್‌ನಲ್ಲಿ ಮಂಗಳೂರು ಅಥವಾ ಉಡುಪಿಯಲ್ಲಿ ಬೃಹತ್‌ ಸಮಾವೇಶ ನಡೆಸುವ ಚಿಂತನೆ ಇದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next