Advertisement

ನಲುಗಿದ ಆರ್ಥಿಕತೆಗೆ ಆತ್ಮನಿರ್ಭರ ಭಾರತ ಸಂಜೀವಿನಿ

03:41 PM Jan 21, 2021 | Team Udayavani |

ಬೆಳಗಾವಿ: ಕೋವಿಡ್‌-19 ಭಾರತದ ಆರ್ಥಿಕತೆ ಮೇಲೆ ಗಂಭೀರ ಪರಿಣಾಮ ಬೀರಿದೆ. ಇದರಿಂದ ಬಡತನದ ಸಂಖ್ಯೆ 40 ದಶಲಕ್ಷದವರೆಗೆ ಹೆಚ್ಚಾಗಿದ್ದು, ಜತೆಗೆ ನಿರುದ್ಯೋಗವೂ ಹೆಚ್ಚಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೋ| ಎಸ್‌. ಆರ್‌. ಕೇಶವ ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಭಾರತದ ಆರ್ಥಿಕತೆಯ ಮೇಲೆ ಕೋವಿಡ್‌ 19 ರ ಪರಿಣಾಮ ಕುರಿತು ಬುಧವಾರ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Advertisement

2020ರ ಎರಡು ತ್ರೈಮಾಸಿಕಗಳಲ್ಲಿ ಬೆಳವಣಿಗೆ ದರ ನಕಾರಾತ್ಮಕವಾಗಿ ಇರುವುದರಿಂದ ತಾಂತ್ರಿಕವಾಗಿ ಆರ್ಥಿಕ ಹಿಂಜರಿತವನ್ನು ಅನುಭವಿಸುತ್ತಿದೆ. ಆದರೆ ಆತ್ಮನಿರ್ಭರ ಭಾರತ ಕಾರ್ಯಕ್ರಮಗಳ ಅನುಷ್ಠಾನದಿಂದಾಗಿ ಭಾರತದ ಆರ್ಥಿಕತೆ ಕ್ರಮೇಣ ಸಹಜ ಸ್ಥಿತಿಗೆ ಬರುತ್ತಿದೆ. ಆತ್ಮನಿರ್ಭರ ಭಾರತ ಉದ್ಯೋಗ ಸೃಷ್ಟಿಸುತ್ತಿದೆ. ಬೇಡಿಕೆ ಹೆಚ್ಚಿಸುವುದರ ಜೊತೆಗೆ ಬಡತನವನ್ನು ಹೋಗಲಾಡಿಸಿ ಭಾರತವನ್ನು ಆರ್ಥಿಕವಾಗಿ ಹೆಚ್ಚು ಬಲಪಡಿಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:ನ್ಯಾಯಬೆಲೆ ಅಂಗಡಿಗೆ ಭೇಟಿ-ಪರಿಶೀಲನೆ

ಆತ್ಮನಿರ್ಭರ ಭಾರತ ಬೇಡಿಕೆಯನ್ನು ಸೃಷ್ಟಿಸುವುದರ ಜೊತೆಗೆ ಪೂರೈಕೆ ಸರಪಳಿಯಲ್ಲಿನ ಅಡೆತಡೆಗಳನ್ನು ಸರಿಪಡಿಸುವಲ್ಲಿ ಪರಿಣಾಮ ಬೀರುತ್ತಿದೆ. ಇದನ್ನು ಯಶಸ್ವಿಗೊಳಿಸಲು ಜನರ ಪಾತ್ರವೂ ಮುಖ್ಯವಾಗಿದೆ. ವಿದ್ಯಾವಂತರು ಆತ್ಮನಿರ್ಭರ ಭಾರತದ ಬಗ್ಗೆ ತಿಳಿದುಕೊಳ್ಳಬೇಕು. ಅನುಷ್ಠಾನದಲ್ಲಿ ಸಹವರ್ತಿ ಅಪಾಯಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಅದರ ಉಪಯೋಗವನ್ನು ಜನರಿಗೆ ತಲುಪಲು ಸಹಾಯ ಮಾಡಬೇಕೆಂದು ಹೇಳಿದರು.

ಅರ್ಥಶಾಸ್ತ್ರ ವಿಭಾಗದ ಅಧ್ಯಕ್ಷ ಪ್ರೋ. ಡಿ.ಎನ್‌. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕರಾದ ಡಾ. ಕಿರಣಕುಮಾರ ಪಿ., ಡಾ. ಅರ್ಜುನ ಜಂಬಗಿ ಇದ್ದರು. ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next