Advertisement

Attack; ಹಾರ ಹಾಕುವ ನೆಪದಲ್ಲಿ ಕೈ ಅಭ್ಯರ್ಥಿ ಕನ್ಹಯ್ಯ ಮೇಲೆ ದಾಳಿ!

01:57 AM May 18, 2024 | Team Udayavani |

ಹೊಸದಿಲ್ಲಿ: ಕಾಂಗ್ರೆಸ್‌ನ ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಶುಕ್ರವಾರ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಚುನಾವಣ ಪ್ರಚಾರದ ಸಂದರ್ಭದಲ್ಲಿ ಹಾರ ಹಾಕುವ ನೆಪ ಹೇಳಿಕೊಂಡು ಬಂದ ಕಿಡಿಗೇಡಿಗಳು, ಏಕಾಏಕಿ ಕನ್ಹಯ್ಯರನ್ನು ಥಳಿಸಲು ಆರಂಭಿಸಿದ್ದಾರೆ. ಜತೆಗೆ ಅಲ್ಲಿ ಸೇರಿದ್ದ ಜನರ ಮೇಲೆ ಶಾಯಿಯನ್ನೂ ಎಸೆಯಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಅಷ್ಟೇ ಅಲ್ಲದೆ, ಅಲ್ಲೇ ಇದ್ದ ಆಪ್‌ ಮಹಿಳಾ ಕೌನ್ಸಿಲರ್‌ ಛಾಯಾ ಗೌರವ್‌ ಶರ್ಮಾ ಅವರೊಂದಿಗೆ ದುರ್ವರ್ತನೆ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಛಾಯಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next