Advertisement

ಸುರತ್ಕಲ್: ಪ್ರತಿಭಟನೆ ನಡೆಸುತ್ತಿದ್ದ ಆಸಿಫ್ ಆಪತ್ಭಾಂಧವ ಮೇಲೆ ಮಂಗಳಮುಖಿಯರಿಂದ ಹಲ್ಲೆ ಯತ್ನ

04:21 PM Feb 16, 2022 | Team Udayavani |

ಸುರತ್ಕಲ್: ಇಲ್ಲಿನ ಎನ್ಐಟಿಕೆ ಬಳಿ ಇರುವ ಟೋಲ್ ಗೇಟ್ ವಿರುದ್ಧ ಕಳೆದ ಕೆಲವು ದಿನಗಳಿಂದ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಭಾಂಧವ ಮೇಲೆ ಮಂಗಳಮುಖಿಯರಿಂದ ಹಲ್ಲೆ ಯತ್ನ ನಡೆದಿದೆ.

Advertisement

ಕಳೆದ ಮಧ್ಯರಾತ್ರಿ ಸುಮಾರು 12.30ರ ಸುಮಾರಿಗೆ ಮೊದಲು ಇಬ್ಬರು ಮಂಗಳಮುಖಿಯರು ಆಗಮಿಸಿದ್ದರು. ನಂತರ ಮಂಗಳಮುಖಿಯರ ತಂಡ ಆಗಮಿಸಿ, ಪ್ರತಿಭಟನಾ ನಿರತರಿಗೆ ಅವಾಚ್ಯ ಶಬ್ಧಗಳಿಂದ ಬಯ್ದು, ಹಲ್ಲೆಗೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:ಯುದ್ಧ ಭೀತಿ: ಸಂಕಷ್ಟದಲ್ಲಿದ್ದಾರೆ ಉಕ್ರೇನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು

ಕೂಡಲೇ ಆಸಿಫ್ ಆಪತ್ಭಾಂಧವ ಫೇಸ್ ಬುಕ್ ಲೈವ್ ವಿಡಿಯೋ ಮಾಡಿದ್ದಾರೆ. ತಂಡದಲ್ಲಿದ್ದ ಹಲವು ಮಂಗಳಮುಖಿಯರು ಬಟ್ಟೆ ಎತ್ತಿ ನರ್ತನ ಪ್ರಾರಂಭಿಸಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಈ ಪ್ರತಿಭಟನಾ ವೇದಿಕೆಯನ್ನು ನಾಳೆಯೇ ಒದ್ದು ಉರುಳಿಸುತ್ತೇವೆ. ನಿಮ್ಮನ್ನು ಇಲ್ಲಿಂದ ಓಡಿಸುತ್ತೇವೆ. ನಿಮ್ಮನ್ನು ನಾಳೆ ಸುರತ್ಕಲ್ ಪೊಲೀಸ್ ಸ್ಟೇಷನ್ ನಲ್ಲಿ ಕೂರಿಸುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ ಎಂದು ದೂರಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next