Advertisement

ಬೆಳ್ಳಂಬೆಳಗ್ಗೆ ಮಾಜಿ BBMP ಕಾರ್ಪೋರೇಟರ್‌ ಮೇಲೆ ದುಷ್ಕರ್ಮಿಗಳ ದಾಳಿ

09:09 AM May 14, 2018 | Team Udayavani |

ಬೆಂಗಳೂರು: ನಗರದ ಸಜ್ಜನ್‌ ರಾವ್‌ ಸರ್ಕಲ್‌ ಬಳಿ ಮಾಜಿ ಬಿಜೆಪಿ ಕಾರ್ಪೋರೇಟರ್‌ ವೇದವ್ಯಾಸ ಭಟ್‌ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.

Advertisement

ಹಿಂದಿನಿಂದಲೂ ಪತ್ರಿಕಾ ವಿತರಕರಾಗಿ ಕೆಲಸ ಮಾಡುತ್ತಿದ್ದ ಭಟ್‌ ಅವರು ಎಂದಿನಂತೆ ಇಂದು ಬೆಳಗ್ಗೆ ಹುಡುಗರಿಗೆ ಮಾರ್ಗದರ್ಶನ ನೀಡಲು ತೆರಳಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ನೆಲಕ್ಕೆ ಕೆಡವಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. 

ದಾಳಿಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗಿದ್ದು, ಕಾಂಗ್ರೆಸ್‌ ಬೆಂಬಲಿತರು ಸೋಲಿನ ಹತಾಶೆಯಿಂದ ದಾಳಿ ನಡೆಸಿದ್ದಾರೆ ಎಂದು ವೇದವ್ಯಾಸ್‌ ಭಟ್‌ ಅವರ ಸಹೋದರಿ ಆರೋಪ ಮಾಡಿದ್ದಾರೆ. 

ವಿ.ವಿ.ಪುರಂ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಸ್ಥಳದಲ್ಲಿದ್ದ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next