Advertisement

Subramanya ಬೈಕ್‌ ಸವಾರರ ಮೇಲೆ ಹಲ್ಲೆ: ವೀಡಿಯೋ ವೈರಲ್‌

12:28 AM Jun 25, 2024 | Team Udayavani |

ಸುಬ್ರಹ್ಮಣ್ಯ: ಇಲ್ಲಿನ ಬಿಸಿಲೇ ಘಾಟ್‌ ಸಮೀಪದ ಸಕಲೇಶಪುರ ತಾಲೂಕು ವ್ಯಾಪ್ತಿಯ ಪ್ರವಾಸಿ ತಾಣ ಪಟ್ಲಬೆಟ್ಟಕ್ಕೆ ತೆರಳಿದ್ದ ಮಂಗಳೂರಿನ ತಂಡದ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Advertisement

ಹಲ್ಲೆಗೊಳಗಾದವರಲ್ಲಿ ಕೊಟ್ಟಾರದ ಯುವಕ ಈ ಬಗ್ಗೆ ಸಕಲೇಶಪುರ ತಾಲೂಕಿನ ಯಸಲೂರು ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಯಾವ ಕಾರಣಕ್ಕೆ ನಡೆದಿದೆ ಎಂದು ನಿಖರ ಕಾರಣ ತಿಳಿದುಬಂದಿಲ್ಲ.

ಬೈಕ್‌ನಲ್ಲಿ ಬಂದಿರುವ ತಂಡದ ಜತೆ ಅಲ್ಲಿದ್ದ ವ್ಯಕ್ತಿಗಳು ಬೈಕ್‌ನಲ್ಲಿ ಹೋಗಬೇಡಿ ಎಂಬಿತ್ಯಾದಿ ವಾಗ್ವಾದನಡೆಸಿ ಹಲ್ಲೆ ನಡೆಸುತ್ತಿರುವುದು ವೀಡಿಯೋದ ಲ್ಲಿದೆ. ಘಟನೆ ಯಾವಾಗ ನಡೆದಿದೆ ಎಂಬ ಬಗ್ಗೆ ತಿಳಿದುಬಂದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next