Advertisement

ಚನ್ನಪಟ್ಟಣದಲ್ಲಿ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

06:36 PM Oct 03, 2022 | Team Udayavani |

ಚನ್ನಪಟ್ಟಣ : ಬಿಜೆಪಿ ಮುಖಂಡ,ಆರ್ ಟಿಐ ಕಾರ್ಯಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸೋಮವಾರ ನಗರದ ಲೋಕೋಪಯೋಗಿ ಇಲಾಖೆಯ ಕಚೇರಿ ಮುಂಭಾಗ ನಡೆದಿದೆ.

Advertisement

ಸಿದ್ದೇಗೌಡ ಎನ್ನುವವರ ಮೇಲೆ ಜೆಡಿಎಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರ ಗೋವಿಂದಹಳ್ಳಿ ನಾಗರಾಜ್ ಮತ್ತು ಸಂಗಡಿಗರು ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.

ಮುಖಕ್ಕೆ 3 ಹೊಲಿಗೆ ಹಾಕುವಷ್ಟರ ಮಟ್ಟಿಗೆ ಹಲ್ಲೆ ನಡೆಸಲಾಗಿದ್ದು, ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲಾಗಿದ್ದು, ಗಾಯಾಳು ಸಿದ್ದೇಗೌಡ ಹೇಳಿಕೆ ನೀಡಿದ್ದು, ನಾನು 2006 ರಿಂದ ಆರ್ ಟಿಐ ಕಾರ್ಯಕರ್ತನಾಗಿದ್ದೇನೆ. ಕೆಲವು ಮಾಹಿತಿ ಬೇಕೆಂದು ಪಿಡಬ್ಲ್ಯೂ ಡಿ ಕಚೇರಿಗೆ ಹೋಗಿದ್ದೆ. ಎಂಜಿನಿಯರ್ ರಮ್ಯಾರವರ ಭೇಟಿ ಮಾಡಿದ್ದೆ. ಈ ಸಂದರ್ಭದಲ್ಲಿ ಗೋವಿಂದಹಳ್ಳಿ ನಾಗರಾಜು ಸಹ ಬಂದರು. ನಾನು ಅವರು ಬರುತ್ತಿದ್ದಂತೆ ಹೊರಗೆ ಹೋಗಲು ಬಂದೆ. ಆಗ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದು, ಕೊರಳ ಪಟ್ಟಿ ಹಿಡಿದರು.ಅವರ ಸಂಬಂಧಿಕರು, ಕಾರು ಚಾಲಕ ಸೇರಿ ಎಲ್ಲರೂ ಹಲ್ಲೆ ಮಾಡಿದರು. ರಾಡ್ ನಿಂದ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿಕೂಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next