Advertisement

ಮಂಗಳೂರು: ಶಾ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದವರ ಮೇಲೆ ದಾಳಿ

08:17 AM Feb 21, 2018 | |

ಮಂಗಳೂರು: ಇಲ್ಲಿನ ಪಣಂಬೂರಿನ ಬೆಂಗ್ರೆ ಬಳಿ ಅಮಿತ್‌ ಶಾ ಅವರ ಸಮಾವೇಶದಲ್ಲಿ ಪಾಲ್ಗೊಂಡು ವಾಪಾಸಾಗುತ್ತಿದ್ದ ಬಿಜೆಪಿ ಕಾರ್ಯಕರ್ತರ ಬಸ್‌ ಮೇಲೆ ಹೊಂಚು ದಾಳಿ ನಡೆಸಲಾಗಿದ್ದು, ಕಲ್ಲು ತೂರಾಟ, ಲಾಠಿ ಚಾರ್ಜ್‌ ನಡೆಸಿದ ಕಳವಳಕಾರಿ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

Advertisement

ಕೋಮುಸೂಕ್ಷ್ಮ ಪ್ರದೇಶವಾದ  ಕಸ್ಟ ತೋಟ ಬೆಂಗ್ರೆಯ ಬಳಿ ಮಲ್ಪೆ ಮೀನುಗಾರರ ಸಮಾವೇಶ ಮುಗಿಸಿ ಬರುತ್ತಿದ್ದ ಬಿಜೆಪಿ ಕಾರ್ಯಕರ್ತರ ಬಸ್ಸನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದೆ.

 ಇಬ್ಬರ ಮೇಲೆ ಚೂರಿಯಿಂದ ಇರಿದಿದ್ದಾರೆ ಎನ್ನಲಾಗಿದ್ದು,  ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಬಳಿಕ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿ , ಲಾಠಿ ಚಾರ್ಜ್‌ ನಡೆಸಿದ್ದಾರೆ. 

ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದ್ದು ಎಸಿಪಿ , ಡಿಸಿಪಿ ಅವರ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

Advertisement

ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next