Advertisement

Crime: ಜುಗಾರಿ ಅಡ್ಡೆಗೆ ದಾಳಿ- ಐವರ ಮೇಲೆ ಪ್ರಕರಣ

12:59 AM Nov 17, 2023 | Team Udayavani |

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮಂಜ ಲ್ಪಾದೆಯ ಗುಡ್ಡದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Advertisement

ಸಜೀಪಮುನ್ನೂರು ನಿವಾಸಿಗಳಾದ ಪ್ರವೀಣ್‌ ಬೆಳ್ಚಡ, ರಂಜಿತ್‌, ನವೀನ್‌, ಪ್ರವೀಣ್‌ ಪೂಜಾರಿ, ಹರೀಶ್‌ ಅವರನ್ನು ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ ನಗರ ಪಿಎಸ್‌ಐ ರಾಮಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿದೆ. ದಾಳಿಯ ವೇಳೆ ಸ್ಥಳದಲ್ಲಿದ್ದ 1,520 ರೂ. ನಗದು, 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next