Advertisement

ರಾಯಚೂರು: ದೇವರ ದರ್ಶನಕ್ಕೆ ಬಂದ ವ್ಯಕ್ತಿಯನ್ನು ಮಚ್ಚಿನಿಂದ ಕಡಿದು ಕೊಲೆ

04:27 PM Aug 24, 2020 | keerthan |

ರಾಯಚೂರು: ದೇವರ ದರ್ಶನಕ್ಕೆ ಬಂದ ವ್ಯಕ್ತಿಯನ್ನು ಮಚ್ಚಿನಿಂದ ಕೊಲೆ ಮಾಡಿದ ಕೃತ್ಯ ತಾಲೂಕಿನ ಪುಚ್ಚಲದಿನ್ನಿಯಲ್ಲಿ ನಡೆದಿದೆ.

Advertisement

ನಂದಯ್ಯ ಸ್ವಾಮಿ (40) ಹತ್ಯೆಯಾಗಿರುವ ವ್ಯಕ್ತಿ. ಚನ್ನಯ್ಯ ಸ್ವಾಮಿ ಎಂಬಾತನೇ ಕೊಲೆ ಎಸಗಿದ್ದಾನೆ. ಕೊಲೆಗೈದಾತ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ.

ನಂದಯ್ಯ ಸ್ವಾಮಿ ದೇವಾಲಯಕ್ಕೆ ಹೋಗಿ ದೇವರಿಗೆ ನಮಿಸುವಾಗ ಹಿಂದಿನಿಂದ ಬಂದ ಚನ್ನಯ್ಯಸ್ವಾಮಿ ಮಚ್ಚಿನಿಂದ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಕೃತ್ಯವೆಸಗಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಗಿಡಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಸ್ಥಳಕ್ಕೆ ಇಡಪನೂರು ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next