Advertisement

ಹೊಲದಲ್ಲಿ ಹೊತ್ತೊಯ್ದು ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಮನನೊಂದ ಬಾಲಕಿ ಆತ್ಮಹತ್ಯೆ

05:50 PM Aug 02, 2020 | keerthan |

ಧಾರವಾಡ: ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತ ಬಾಲಕಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬೋಗೂರು ಗ್ರಾಮದಲ್ಲಿ ನಡೆದಿದೆ.

Advertisement

ಗ್ರಾಮದ 14 ವರ್ಷದ ಬಾಲಕಿಯ ಮೇಲೆ ಅದೇ ಗ್ರಾಮದ ಬಸೀರ್ ಗಡದಾರೆ ಎಂಬ ಆರೋಪಿ ಕಳೆದ ಗುರುವಾರ ಅತ್ಯಾಚಾರ ನಡೆಸಿದ್ದ. ಇದರಿಂದ ಮನನೊಂದು ಆ ಬಾಲಕಿ ಶುಕ್ರವಾರ ಕ್ರಿಮಿನಾಶಕ ಕುಡಿದಿದ್ದಳು. ಆದರೆ ಚಿಕಿತ್ಸೆ ಫಲಿಸದೇ ಆ ಬಾಲಕಿ ರವಿವಾರ ಅಸುನೀಗಿದ್ದಾಳೆ.

ಬಾಲಕಿ ಗುರುವಾರ ಹೊಲಕ್ಕೆ ಪೂಜೆ ಮಾಡಲು ಹೋಗಿದ್ದ ವೇಳೆ ಆಕೆಯನ್ನು ಹೊತ್ತೊಯ್ದು ಆರೋಪಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಘಟನೆಯನ್ನು ಮಾರನೇ ದಿನ ಬಾಲಕಿ ಕ್ರಿಮಿನಾಶಕ ಕುಡಿದು ಆದ ಘಟನೆಯನ್ನು ತನ್ನ ಮನೆಯಲ್ಲಿ ಹೇಳಿದ್ದಾಳೆ. ಕೂಡಲೇ ಆಕೆಯನ್ನು ಚನ್ನಮ್ಮನ ಕಿತ್ತೂರಿಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿತ್ತು. ಅಲ್ಲಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಹೋಗಿ ಎಂದು ಹೇಳಿದ್ದರಿಂದ ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಚಿಕಿತ್ಸೆ ಫಲಿಸದೇ ಬಾಲಕಿ ಅಸುನೀಗಿದ್ದಾಳೆ.

ಇದನ್ನೂ ಓದಿ: ಸುಶಾಂತ್ ಪ್ರಕರಣ: ಬಿಹಾರ ಪೊಲೀಸರಿಗೆ ಆ ಮಹತ್ವದ ಮಾಹಿತಿ ನೀಡಲು ನಿರಾಕರಿಸಿದ ಮುಂಬೈ ಪೊಲೀಸರು

ಅತ್ಯಾಚಾರ ಆರೋಪಿ ಬಸೀರನಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಬಾಲಕಿಯ ಪೋಷಕರು ಒತ್ತಾಯಿಸಿದ್ದಾರೆ. ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬಾಲಕಿಯ ಕಡೆಯವರು ಜಮಾಯಿಸಿದ್ದರು. ಈ ಸಂಬಂಧ ಗರಗ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next