Advertisement

ಶಾಸಕ ಸುಧಾಕರ್‌ ಮೇಲೆ ಹಲ್ಲೆ: ಪೊಲೀಸರಿಗೆ ದೂರು

12:29 AM Jul 24, 2019 | Team Udayavani |

ಬೆಂಗಳೂರು: ವಿಧಾನಸೌಧದಲ್ಲಿ ಚಿಕ್ಕಬಳ್ಳಾಪುರ ಶಾಸಕ ಕೆ.ಸುಧಾಕರ್‌ ಅವರನ್ನು ಎಳೆದಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಶಾಸಕ ಪ್ರಿಯಾಂಕ್‌ ಖರ್ಗೆ ಹಾಗೂ ಕೆಲ ವಿಧಾನಪರಿಷತ್‌ ಸದಸ್ಯರ ವಿರುದ್ಧ ವಕೀಲ ಎನ್‌.ಪಿ.ಅಮೃತೇಶ್‌ ಮಂಗಳವಾರ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement

ಶಾಸಕ ಸುಧಾಕರ್‌ ಜು.10ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಸ್ವೀಕರ್‌ ರಮೇಶ್‌ ಕುಮಾರ್‌ ಅವರ ಕಚೇರಿಗೆ ಹೋಗುವಾಗ ಶಾಸಕ ಪ್ರಿಯಾಂಕ್‌ ಖರ್ಗೆ ಹಾಗೂ ಕೆಲ ವಿಧಾನಪರಿಷತ್‌ ಸದಸ್ಯರು ಏಕಾಏಕಿ ಅವರನ್ನು ಬಲವಂತವಾಗಿ ಸಚಿವ ಕೆ.ಜೆ.ಜಾರ್ಜ್‌ ಅವರ ಕೊಠಡಿಗೆ ಎಳೆದೊಯ್ದು, ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಆ ಮೂಲಕ ಶಾಸಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವಕೀಲ ಅಮೃತೇಶ್‌ ದೂರಿನಲ್ಲಿ ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next