Advertisement

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

10:46 PM Sep 21, 2024 | Team Udayavani |

ಅರಂತೋಡು: ವಸತಿ ನಿಲಯದಿಂದ ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವನ ಮರ್ಮಾಂಗವನ್ನು ಇಬ್ಬರು ವಿದ್ಯಾರ್ಥಿಗಳು ಹಿಡಿದೆಳೆದ ಪರಿಣಾಮವಾಗಿ ಮರ್ಮಾಂಗ ಊದಿಕೊಂಡು ಬಾಲಕ ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

Advertisement

ಸೆ. 14ರಂದು ರಾತ್ರಿ ವಸತಿ ನಿಲಯದಲ್ಲಿ ಇಬ್ಬರು ಸಹಪಾಠಿ ವಿದ್ಯಾರ್ಥಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು. ಆ ಬಳಿಕ ಬಾಲಕ ಮೂತ್ರ ವಿಸರ್ಜನೆ ಮಾಡುವ ವೇಳೆ ನೋವಾಗುತ್ತಿದ್ದ ಪರಿಣಾಮ ಮನೆಗೆ ಬಂದಿದ್ದನೆನ್ನಲಾಗಿದೆ. ಆಬಳಿಕ ತಾಯಿಗೆ ವಿಷಯ ತಿಳಿಸಿದ ಬಳಿಕ ಬಾಲಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಈಗ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾನೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next