Advertisement

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವರ ಬೆಂಗಾವಲು ಪಡೆ ಮೇಲೆ ದಾಳಿ

04:55 PM Feb 25, 2023 | Team Udayavani |

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೂಚ್ ಬಿಹಾರದಲ್ಲಿ ಕೇಂದ್ರ ಸಚಿವ ನಿಶಿತ್ ಪ್ರಮಾಣಿಕ್ ಅವರ ಬೆಂಗಾವಲು ಪಡೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಶನಿವಾರ ನಡೆದಿದೆ.

Advertisement

ಸಚಿವರ ಕಾರಿನ ಗಾಜುಗಳಿಗೆ ಹಾನಿಯಾಗಿದೆ. ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಕಲ್ಲಿನ ತೂರಾಟ ಮಾಡಿದ್ದಾರೆ ಎಂದು ಕೇಂದ್ರ ಸಚಿವರು ಆರೋಪಿಸಿದ್ದಾರೆ.

ಜನರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಬೇಕಾಯಿತು. ನಿಶಿತ್ ಪ್ರಮಾಣಿಕ್ ಅವರು ಕೂಚ್ ಬಿಹಾರ್ ನ ಸಂಸದರಾಗಿದ್ದಾರೆ. “ಇಲ್ಲಿ ಸಚಿವರಿಗೆ ರಕ್ಷಣೆಯಿಲ್ಲ. ಇನ್ನು ಸಾಮಾನ್ಯ ಜನರ ಗತಿಯನ್ನು ಅಂದಾಜಿಸಿ. ಈ ಘಟನೆಯು ಬಂಗಾಳದ ಪ್ರಜಾಪ್ರಭುತ್ವದ ಸ್ಥಿತಿಯನ್ನು ತೋರಿಸುತ್ತದೆ” ಎಂದು ಅವರು ಹೇಳಿಕೊಂಡಿದ್ದಾರೆ.

ನಿಶಿತ್ ಪ್ರಮಾಣಿಕ್ ಅವರು ಸ್ಥಳೀಯ ಬಿಜೆಪಿ ಕಚೇರಿಗೆ ತೆರಳುತ್ತಿದ್ದರು. ಬಿಎಸ್ಎಫ್ ಪಡೆಗಳಿಂದ ಬುಡಕಟ್ಟು ಜನರ ಹತ್ಯೆಯ ಕುರಿತು ಸ್ಥಳೀಯ ಜನರಿಗೆ ಪ್ರಮಾಣಿಕ್ ಅವರ ಮೇಲೆ ಆಕ್ರೋಶವಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next