Advertisement

ವಿಟ್ಲ ಎಸ್.ಐ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಯತ್ನ: ಆರೋಪಿ ಬಂಧನ

10:13 AM Mar 26, 2021 | Team Udayavani |

ವಿಟ್ಲ: ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಮೇಲೆ ಗುಂಡಿನ ದಾಳಿ ಮಾಡಿ ಕೊಲೆಗೆ ಯತ್ನಿಸಿದ ದುಷ್ಕರ್ಮಿಯೋರ್ವ ಪೊಲೀಸರ ಅತಿಥಿಯಾದ ಘಟನೆ ವಿಟ್ಲ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಶುಕ್ರವಾರ ಮುಂಜಾನೆ ವೇಳೆ ನಡೆದಿದೆ.

Advertisement

ವಿಟ್ಲ ಎಸ್ ಐ ವಿನೋದ್ ರೆಡ್ಡಿ ಮೇಲೆ ದುಷ್ಕರ್ಮಿಯಿಂದ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಎಸ್.ಐ.ವಿನೋದ್ ರೆಡ್ಡಿ ಅವರಿಗೆ ಗಾಯಗಳಾಗಿವೆ.

ಇದನ್ನೂ ಓದಿ:ರಿಕ್ಷಾ ಚಾಲಕನ ಪುತ್ರನ ಸಾಧನೆ ; “ಗೇಟ್‌’ ಪರೀಕ್ಷೆ: ಅಭಿಷೇಕ್‌ ಶೆಟ್ಟಿಗೆ 5ನೇ ರ್‍ಯಾಂಕ್‌

ವಿಟ್ಲ ಸಮೀಪದ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ವಿಟ್ಲ ಎಸ್.ಐ.ವಿನೋದ್ ರೆಡ್ಡಿ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಕಾರಿನಲ್ಲಿದ್ದ ದುಷ್ಕರ್ಮಿಯೋರ್ವ ಎಸ್.ಐ.ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.

Advertisement

ಕೂಡಲೇ ಕಾರ್ಯಚರಣೆ ನಡೆಸಿದ ಸಿಬ್ಬಂದಿಗಳು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಸುಳ್ಳು ಹೇಳಿ ಅನ್ಯಕೋಮಿನ ಮಹಿಳೆಯೊಂದಿಗೆ ಮದುವೆ ; 62 ವರ್ಷದ ಗಂಗಾಧರ್‌ ಮೇಲೆ ಅತ್ಯಾಚಾರ ಕೇಸು

ಯಾವ ಕಾರಣಕ್ಕೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ ಎಂಬ ವಿಚಾರ ಇನ್ನಷ್ಟೆ ಬೆಳಕಿಗೆ ಬರಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next