Advertisement

ಸವಣೂರು: ವಿ.ಎ. ಕಚೇರಿಗೆ ನುಗ್ಗಿ ದಾಂಧಲೆ, ಕೊಲೆ ಯತ್ನ

01:15 PM Sep 28, 2022 | Team Udayavani |

ಸವಣೂರು: ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಚೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ, ಕಲ್ಲು ಎತ್ತು ಹಾಕಿ ಕೊಲೆಗೆ ಯತ್ನಿಸಿದ ಘಟನೆ ಸೆ.28ರ ಬುಧವಾರ ಸವಣೂರು ಜಂಕ್ಷನ್ ನಲ್ಲಿ ನಡೆದಿದೆ.

Advertisement

ಸವಣೂರು ಗ್ರಾಮದ ಇಡ್ಯಾಡಿ ನಿವಾಸಿ ಪ್ರಸಾದ್ ಎಂಬಾತ ಕೊಲೆಗೆ ಯತ್ನಿಸಿದವರು ಎನ್ನಲಾಗಿದೆ.

ವಿ.ಎ. ಕಚೇರಿ ಮಾತ್ರವಲ್ಲದೇ ಸವಣೂರು ಗ್ರಾ.ಪಂ. ಕಟ್ಟಡದಲ್ಲಿರುವ ಗುಣಪಾಲ ಗೌಡ ಇಡ್ಯಾಡಿ ಎಂಬವರಿಗೆ ಸೇರಿದ ಬೇಕರಿಯನ್ನೂ ಕೂಡಾ ತಲವಾರಿನಿಂದ ಪುಡಿಗೈದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.

ಸ್ಥಳಕ್ಕೆ ಬೆಳ್ಳಾರೆ ಠಾಣೆಯ ಎಸೈ ಸುಹಾಸ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next