Advertisement

ದಲಿತರಲ್ಲಿ ಗೊಂದಲ ಮೂಡಿಸಲು ಸಿದ್ದು ಯತ್ನ: ಕಾರಜೋಳ

11:22 PM Jul 28, 2023 | Team Udayavani |

ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲು ವಿಚಾರದಲ್ಲಿ ಕೇಂದ್ರ ಸಚಿವ ನಾರಾಯಣ ಸ್ವಾಮಿ ಲೋಕಸಭೆಯಲ್ಲಿ ನೀಡಿದ ಉತ್ತರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ದಲಿತ ಸಮುದಾಯದಲ್ಲಿ ಗೊಂದಲ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಸಂವಿಧಾನದ ಆರ್ಟಿಕಲ್‌ 341 ಪ್ರಕಾರ ಯಾವುದೇ ಒಳಮೀಸಲಾತಿಗೆ ಸ್ಪಷ್ಟ ನಿರ್ದೇಶನ ಇಲ್ಲ ಎಂಬ ವಿಚಾರ ಪ್ರಸ್ತಾಪಿಸಿ ಪ್ರಶ್ನೆಗೆ ಸೀಮಿತ ಉತ್ತರ ಕೊಟ್ಟಿದ್ದಾರೆ. ಆದರೆ ಸಿದ್ದರಾಮಯ್ಯ ನವರು ಕೇಂದ್ರ ಸರಕಾರ ಹಾಗೂ ಹಿಂದಿನಬಿಜೆಪಿ ಸರಕಾರದ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ. ಸುಳ್ಳು ಹೇಳಿ ಮೋಸ ಮಾಡುವುದರಲ್ಲಿ ಅವರು ನಿಸ್ಸೀಮರು ಎಂದು ಆರೋಪಿಸಿದರು.

ಬಸವರಾಜ ಬೊಮ್ಮಾಯಿಯ ವರ ನೇತೃತ್ವದ ಸರಕಾರ ಇದ್ದಾಗ ಮಾಧುಸ್ವಾಮಿಯವರ ಅಧ್ಯಕ್ಷತೆ ಯಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿತ್ತು. ಅಲ್ಲಿ ನಿರ್ಣಯಿಸಿ ಜನಸಂಖ್ಯೆಗೆ ಅನುಗುಣವಾಗಿ 101 ಜಾತಿಗೆ ಅನ್ಯಾಯ ಆಗಲಾರದ ರೀತಿಯಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದೆವು. 4 ಗುಂಪುಗಳಾಗಿ ವಿಂಗಡಿಸಿ ಸಂವಿಧಾನ ತಿದ್ದುಪಡಿಗೆ ಶಿಫಾರಸು ಮಾಡಿದ್ದೆವು. ಸ್ವಾತಂತ್ರ್ಯ ಬಂದಾಗಿನಿಂದ ಜನರಿಗೆ ಕಾಂಗ್ರೆಸ್ಸಿನಿಂದ ಮೋಸ ಆಗುತ್ತಿದೆ. ಬಿಜೆಪಿ ಹಾಗೂ ಆರೆಸ್ಸೆಸ್‌ ಸಾಮಾಜಿಕ ನ್ಯಾಯದ ಪರವಾಗಿದೆ ಎಂದು ಸ್ಪಷ್ಟಪಡಿಸಿದರು.

ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಚಲವಾದಿ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next