Advertisement
ಜಿಲ್ಲಾಡಳಿತ, ಕಾರ್ಮಿಕ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಹಯೋಗದಲ್ಲಿ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಮಿಕ ಸಮ್ಮಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
ಜಿ.ಪಂ ಅಧ್ಯಕ್ಷ ದಿನಕರ ಬಾಬು,ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ,ಲಾಲಾಜಿ ಆರ್ ಮೆಂಡನ್, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ,ತಾ.ಪಂ.ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್,ಜಿ.ಪಂ.ಸದಸ್ಯೆ ಗೀತಾಂಜಲಿ ಸುವರ್ಣ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಉಪಸ್ಥಿತರಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ್ ಆಚಾರ್ ಸ್ವಾಗತಿಸಿ, ಶಿಕ್ಷಕ ಪ್ರಶಾಂತ್ ಶೆಟ್ಟಿ ಹಾವಂಜೆ ನಿರ್ವಹಿಸಿದರು.
Advertisement
ಅರ್ಜಿ ಸ್ವೀಕಾರವಾಗಿಲ್ಲಚಿಂದಿ ಆಯುವವರಿಗೆ ಹಾಗೂ ಮಂಡಕ್ಕಿ ಭಟ್ಟಿ ಕಾರ್ಮಿಕರಿಗೆ ಕೊಡ ಮಾಡುವ ವಿಶೇಷ ಪುರಸ್ಕಾರ ಹಾಗೂ ಶ್ರಮ ಸಮ್ಮಾನ ಪ್ರಶಸ್ತಿಗೆ ಯಾವುದೇ ಅರ್ಜಿ ಸ್ವೀಕಾರವಾಗಲಿಲ್ಲ. 31,266 ಅಸಂಘಟಿತ ಕಾರ್ಮಿಕರು
ಜಿಲ್ಲೆಯಲ್ಲಿ 26,922 ಪುರುಷರು ಮತ್ತು 4,344 ಮಳೆಯರು ಸೇರಿದಂತೆ 31,266 ಅಸಂಘಟಿತ ಕಾರ್ಮಿಕರು ನೊಂದಣಿಯಾಗಿದ್ದಾರೆ. ಅವರೆಲ್ಲರಿಗೂ ಇಲಾಖೆಯಿಂದ ಸ್ಮಾರ್ಟ್ ಕಾರ್ಡ್ ನೀಡಲಾಗಿದೆ. ವಿವಿಧ ಯೋಜನೆಯಡಿ 12,370 ಫಲಾನುಭಗಳಿಗೆ 12.49 ಕೋ.ರೂ. ಧನ ಸಹಾಯ ನೀಡಲಾಗಿದೆ. ಸಾಮಾಜಿಕ ಭದ್ರತೆಯಡಿ ಅಪಘಾತದಿಂದ ಮೃತಪಟ್ಟರೆ ಕಾರ್ಮಿಕರ ಕುಟುಂಬಕ್ಕೆ 5 ಲ. ರೂ. ಪರಿಹಾರ ನೀಡಲಾಗುತ್ತದೆ.
– ಸತ್ಯನಾರಾಯಣ, ಕುಂದಾಪುರ ವಲಯದ ಕಾರ್ಮಿಕ ನಿರೀಕ್ಷಕ