Advertisement

ಹುಬ್ಬಳ್ಳಿಯಲ್ಲಿ ಸರ್ಕಾರಿ ಬಸ್‌ಗೆ ಬೆಂಕಿ ಹಚ್ಚಲು ಯತ್ನ 

03:16 PM Sep 05, 2017 | |

ಹುಬ್ಬಳ್ಳಿ : ರಾಜ್ಯಾದ್ಯಂತ ಬಿಜೆಪಿ ಯುವಮೋರ್ಚಾ ನಡೆಸುತ್ತಿದ್ದ ಮಂಗಳೂರು ಚಲೋ ಬೈಕ್‌ ರ‍್ಯಾಲಿಗೆ ಪೊಲೀಸರು ತಡೆ ಒಡ್ಡಿದ ಕುರಿತು ಆಕ್ರೋಶ ಭುಗಿಲೆದ್ದಿರುವ ವೇಳೆಯಲ್ಲೇ ಕಿಡಿಗೇಡಿಗಳು ನೇಕಾರ ನಗರದಲ್ಲಿ ಸರ್ಕಾರಿ ಬಸ್‌ಗೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ.  

Advertisement

2 ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ವಾಯುವ್ಯ ಕರ್ನಾಟಕ ಸಾರಿಗೆಯ ಬಸ್‌ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಅದೃಷ್ಟವಷಾತ್‌ ಬೆಂಕಿಯನ್ನು ಸ್ಥಳೀಯರು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ದಾಳಿ ವೇಳೆ ಬಸ್‌ನ ಗಾಜುಗಳನ್ನು ಪುಡಿಗೈಯಲಾಗಿದೆ. 

ಯಾವುದೇ ಹಾನಿ ಸಂಭವಿಸಿಲ್ಲ. ಬಸ್‌ನಲ್ಲಿದ್ದ ಸಿಬಂದಿಗಳು ಸೇರಿದಂತೆ 32 ಮಂದಿ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.  

ಕಸಬಾಪೇಟೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next