Advertisement

ಪ್ರತಿಭಟನೆಯಲ್ಲಿ ಎಸ್‌ಐ ಕೊಲೆ ಯತ್ನ: ಮತ್ತೋರ್ವನ ಸೆರೆ

10:36 AM Jan 12, 2022 | Team Udayavani |

ಉಪ್ಪಿನಂಗಡಿ, ಜ. 11: ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸರು ವಶಪಡಿಸಿಕೊಂಡಿದ್ದ ಪಿಎಫ್ಐ ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಡಿ.14ರಂದು ನಡೆದ ಪ್ರತಿಭಟನೆಯ ಸಂದರ್ಭ ಬಂಟ್ವಾಳ ಗ್ರಾಮಾಂತರ ಠಾಣಾ ಉಪ ನಿರೀಕ್ಷಕ ಪ್ರಸನ್ನ ಕುಮಾರ್‌ ಅವರಿಗೆ ಚೂರಿಯಿಂದ ತಿವಿದು ಕೊಲೆ ಯತ್ನ ಸೇರಿದಂತೆ ಇನ್ನಿತರ ಕೃತ್ಯಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಬೋರುಗುಡ್ಡೆ ನಿವಾಸಿ ಮಹಮ್ಮದ್‌ ಹನೀಫ್ (41) ಬಂಧಿತ. ಈತನನ್ನು ಮಂಗಳವಾರ ಅಪರಾಹ್ನ ಮಡಂತ್ಯಾರು ಪಂ. ಕಚೇರಿ ಬಳಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಒಮ್ಮೆ ಐವರು ಬಳಿಕ ಇಬ್ಬರನ್ನು ಬಂಧಿಸಲಾಗಿತ್ತು. ಘಟನೆಯ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಕೃತ್ಯಕ್ಕೆ ಸಂಬಂಧಿಸಿ ಅದೇ ದಿನ 10 ಮಂದಿಯನ್ನು ಬಂಧಿಸಲಾಗಿತ್ತು. ಡಿ. 14ರ ಘಟನಾವಳಿಯಲ್ಲಿ ಈವರೆಗೆ ಒಟ್ಟು 18 ಮಂದಿಯ ಬಂಧನವಾದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next