Advertisement

ಪ್ರೀತಿಸಿದ ಯುವತಿ ಅತ್ಯಾಚಾರ; ಹತ್ಯೆ ಯತ್ನ

03:47 PM Apr 27, 2020 | mahesh |

ಬೆಂಗಳೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಕೊಲೆಗೆ ಯತ್ನಿಸಿರುವ ಘಟನೆ ಮಾರತ್‌ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ
ನಡೆದಿದೆ. ಮಾರತ್‌ಹಳ್ಳಿ ನಿವಾಸಿ 29 ವರ್ಷದ ಯುವತಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಸಂಜಯನಗರ ನಿವಾಸಿ ಅರ್ಕ್‌ ಬಕ್ಷಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.

Advertisement

ಒಂದು ವರ್ಷದ ಹಿಂದೆ ಮಾರತ್‌ಹಳ್ಳಿಯಲ್ಲಿ ನೆಲೆಸಿದ್ದ ಯುವತಿ, ತನ್ನ ಮನೆ ಸಮೀಪದ ಎನ್‌ ಜಿಒದಲ್ಲಿ ಕೆಲಸ ಮಾಡುತ್ತಿದ್ದರು. ಅದೇ ವೇಳೆ ಅರ್ಕ್‌ ಬಕ್ಷಿ ಪರಿಚಯವಾಗಿದ್ದ. ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿತ್ತು. ಪ್ರೀತಿಸುತ್ತಿದ್ದ ವಿಚಾರವನ್ನು ಯುವತಿಯ ಪಾಲಕರಿಗೆ ತಿಳಿಸಿ, ಮದುವೆಯಾಗುವುದಾಗಿ ಹೇಳಿದ್ದ. ಬಳಿಕ ಆತ ಕೆಲಸ ಮಾಡುತ್ತಿದ್ದ ಕಚೇರಿ ಸಂಜಯನಗರಕ್ಕೆ ಸ್ಥಳಾಂತರವಾಗಿತ್ತು. ಈ ಹಿನ್ನೆಲೆಯಲ್ಲಿ ಅರ್ಕ್‌ ಬಕ್ಷಿ ಕೂಡ ಸಂಜಯನಗರಕ್ಕೆ ಬಂದು ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಭೇಟಿ ಮಾಡಬೇಕೆಂದು ಹೇಳಿ ಆಕೆಯನ್ನು ಮನೆಗೆ ಕರೆಸಿಕೊಂಡು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಫೆ.14ರಂದು ಕಾಡು ಬೀಸನಹಳ್ಳಿಯಲ್ಲಿರುವ ಪಬ್‌ಗೆ ಕರೆದೊಯ್ದಿದ್ದ. ಈ ವೇಳೆ ಸ್ನೇಹಿತರಿಗೆ ಯುವತಿಯನ್ನು ಪರಿಚಯಿಸಿಕೊಂಡಿದ್ದ. ಅಲ್ಲದೇ, ಸ್ನೇಹಿತರ ಮುಂದೆ ಮದುವೆಯಾಗುವುದಾಗಿ ಹೇಳಿ ಕೈ ಬೆರಳಿಗೆ ಉಂಗುರ ಹಾಕಿದ್ದಾನೆ.

ವಿವಾಹದ ವಿಚಾರ ಅರ್ಕ್‌ ಬಕ್ಷಿಯ ಪಾಲಕರಿಗೆ ಗೊತ್ತಾಗಿತ್ತು. ಆದರೆ, ಅವರು ಅದಕ್ಕೆ ವಿರೋಧ ವ್ಯಕ್ತಪಡಿಸಿ ಬೆದರಿಕೆ ಸಂದೇಶ ಕಳುಹಿಸಿದ್ದರು. ಅಲ್ಲದೇ, ಅರ್ಕ್‌ ಬಕ್ಷಿಗೆ ಕರೆ ಮಾಡಿ, ಯುವತಿ
ಜತೆಗಿನ ಸಂಬಂಧ ಬಿಟ್ಟುಬಿಡು. ಇಲ್ಲವಾದರೆ ನಿನ್ನನ್ನು ಮನೆಯಿಂದ ಹೊರಹಾಕುವುದಾಗಿ ಬೆದರಿಸಿದ್ದಾರೆ. ಹೀಗಾಗಿ ಆರೋಪಿ ಮಾ.23ರಂದು ಮನೆಯಿಂದ ಹೊರ ಹೋಗುವಂತೆ ಯುವತಿಗೆ ಒತ್ತಾಯಿಸಿದ್ದ. ಅದಕ್ಕೆ ನಿರಾಕರಿಸಿದಾಗ, ಹಲ್ಲೆ ನಡೆಸಿ, ಕೊಲೆ ಯತ್ನ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖೀಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next