Advertisement

ಗೋವಾದಲ್ಲಿ ಪ್ರತಿ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನ: ಪಿ.ಚಿದಂಬರಂ

04:58 PM Dec 10, 2021 | Team Udayavani |

ಪಣಜಿ: ಬಿಜೆಪಿಯನ್ನು ಸೋಲಿಸುವ ಸಾಮಥ್ರ್ಯ ಕಾಂಗ್ರೆಸ್ ಪಕ್ಷಕ್ಕಿದ್ದು, 2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯನ್ನು ಸೋಲಿಸುವುದು ಖಚಿತ. ಪ್ರತಿಪಕ್ಷಗಳು ಒಗ್ಗೂಡಬೇಕು. ಬಿಜೆಪಿಯನ್ನು ಸೋಲಿಸಲು ಮತ್ತು ದೇಶದ ಹಿತದೃಷ್ಠಿಯಿಂದ ಎಲ್ಲರೂ ಒಗ್ಗೂಡುವುದು ಮುಖ್ಯ. ಇದಕ್ಕಾಗಿ ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದೆ ಎಂದು ಕಾಂಗ್ರೆಸ್ ಗೋವಾ ಚುನಾವಣಾ ಪ್ರಭಾರಿ ಪಿ.ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.

Advertisement

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ಗೋವಾಕ್ಕೆ ಪಕ್ಷಾಂತರ ಕಳಂಕ ಬಂದಿದೆ. ಯಾವುದೇ ಸಂದರ್ಭದಲ್ಲಿಯೂ ಪಕ್ಷಾಂತರಿಗಳಿಗೆ ಕಾಂಗ್ರೆಸ್ ಪಕ್ಷದಲ್ಲಿ ಸ್ಫರ್ಧಿಸಲು ಅವಕಾಶ ನೀಡುವುದಿಲ್ಲ. ಇಂತಹ ಪಕ್ಷಾಂತರಿಗಳನ್ನು ಸ್ಮರಿಸಿ ಸೋಲಿಸಬೇಕು. ಒಂದು ಪಕ್ಷದ ಟಿಕೆಟ್‍ನಲ್ಲಿ ಸ್ಫರ್ಧಿಸಿ ಆಯ್ಕೆಯಾಗಿ ಮತ್ತೊಂದು ಪಕ್ಷಕ್ಕೆ ಸೇರುವುದು ಸಾರ್ವಜನಿಕ ಅಭಿಪ್ರಾಯಕ್ಕೆ ಅಗೌರವ ತಂದಂತೆ ಎಂದು ನುಡಿದರು.

ಪಕ್ಷಾಂತರ ಕಾನೂನು ದೋಷಪೂರಿತವಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಹೊಸ ಪಕ್ಷಾಂತರ ವಿರೋಧಿ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next