Advertisement

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆಗೆ ಪ್ರಯತ್ನ: ಇಬ್ಬರು ಬೆಂಬಲಿಗರಿಗೆ ಗಾಯ

04:29 PM Feb 20, 2023 | Team Udayavani |

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಮಲಾಪುರ ಪಟ್ಟಣದಲ್ಲಿ ಸೋಮವಾರ ಬೆಳಗ್ಗೆ ನಡೆಯುತ್ತಿದ್ದ ಸಂತ ಸೇವಾಲಾಲ ಜಯಂತಿ ವೇದಿಕೆಯ ಸಮೀಪ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆಗೆ ಪ್ರಯತ್ನ ನಡೆದಿದೆ. ಈ ವೇಳೆ ಇಬ್ಬರು ಬೆಂಬಲಿಗರು ಗಾಯಗೊಂಡಿದ್ದಾರೆ.

Advertisement

ಗಾಯಗೊಂಡವರನ್ನು ಅನಿಲ್ ಹಾಗೂ ಶಾಂತಕುಮಾರ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಮಣಿಕಂಠ ರಾಠೋಡ್ ಬೆಂಬಲಿಗರು ಎಂದು ಹೇಳಲಾಗುತ್ತಿದೆ. ಗಾಯಗೊಂಡ ಇಬ್ಬರನ್ನು ನಗರದ ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಘಟನೆಯ ಕುರಿತು ಮಾಧ್ಯಮಗಳಿಗೆ ವಿಷಯ ಹಂಚಿಕೊಂಡ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನ ಮೇಲೆ ಪ್ರಿಯಾಂಕ ಖರ್ಗೆ ಬೆಂಬಲಿಗರು ದಾಳಿ ಮಾಡಿದ್ದಾರೆ. ಇತ್ತೀಚಿಗೆ ನಡೆದ ಬೆಳವಣಿಗೆಯಲ್ಲಿ ಅವರು ನನ್ನ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಣಿಕಂಠ ರಾಠೋಡ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಚಿವ ಚಿತ್ತಾಪುರ ಹಾಲಿ ಶಾಸಕ ಪ್ರಿಯಾಂಕ ಖರ್ಗೆ ವಿರುದ್ಧ ತುಂಬಾ ಹಗುರವಾಗಿ ಮಾತನಾಡಿದಲ್ಲದೆ, ಚುನಾವಣೆಯಲ್ಲಿ ಸೋಲಿಸುವ ಹಿನ್ನೆಲೆಯಲ್ಲಿ ಕೆಲವು ಅಸಂಬದ್ಧ ಮಾತುಗಳನ್ನು ಆಡಿದ್ದರು. ಆ ಹಿನ್ನೆಲೆಯಲ್ಲಿ ಕೆಲವು ದಲಿತ ಬೆಂಬಲಿಗರು ಈ ದಾಳಿ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next